Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಹೆಣ್ಣು ಮಕ್ಕಳಿಗೆ ಉಚಿತ ರಕ್ತಚಂದನ ಗಿಡಗಳ ವಿತರಣೆ ಯೋಜನೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಎಸ್.ಡಿ.ಪಿ. ರೂರಲ್ ಡೆವಲಪ್‍ಮೆಂಟ್ ಸೊಸೈಟಿ ವತಿಯಿಂದ ಹೆಣ್ಣು ಮಕ್ಕಳಿಗೆ ಉಚಿತ ರಕ್ತಚಂದನ ಗಿಡಗಳ ವಿತರಣೆ ಯೋಜನೆ ಹಮ್ಮಿಕೊಳ್ಳಲಾಗಿದೆ.
ಕಳೆದ 10 ವರ್ಷದಿಂದ ಹಸಿರು ಬೆಳೆಸುವ ಮನೋಭಾವದಿಂದ, ಭವಿಷ್ಯದಲ್ಲಿ ಹೆಣ್ಣು ಮಕ್ಕಳು ಆರ್ಥಿಕವಾಗಿ ಸದೃಢರಾಗಬೇಕು ಎನ್ನುವ ಆಶಯದೊಂದಿಗೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸತೀಶ್ ಬಿ. ಶೆಟ್ಟಿ ಕಾಡೂರು ತಿಳಿಸಿದ್ದಾರೆ.


5 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಪೋಷಕರಿಗೆ ಉಚಿತವಾಗಿ 15 ರಕ್ತಚಂದನ ಗಿಡಗಳನ್ನು ವಿತರಿಸಲು ತೀರ್ಮಾನಿಸಿದ್ದು,ಪ್ರತಿ ಮಗುವಿಗೆ ನೀಡುವ ರಕ್ತಚಂದನ ಗಿಡಗಳು ಮುಂದಿನ 15 ವರ್ಷಗಳಲ್ಲಿ ಉತ್ತಮ ಬೆಲೆ ಬಾಳುವ ಮರಗಳಾಗುತ್ತವೆ. ಇದರಿಂದ ಬರುವ ಮೊತ್ತವು ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕೆ ನೆರವಾಗಲಿದೆ.

ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳುವುದರಿಂದ ತನ್ನ ಮಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸುವುದರ ಜತೆಗೆ, ಹಸಿರು ಉಳಿಸುವ ಸಂಸ್ಥೆಯ ಯೋಜನೆಯಲ್ಲಿ ಪಾಲ್ಗೊಂಡಂತಾಗುತ್ತದೆ.
ಸಂಸ್ಥೆಯು ಈಗಾಗಲೇ ಉಡುಪಿ ಜಿಲ್ಲೆಯಾದ್ಯಂತ ನಾನಾ ಭಾಗದ ರೈತರು 300ಎಕರೆ ಜಾಗದಲ್ಲಿ 1,00,000ಕ್ಕೂ ಮಿಕ್ಕಿ ರಕ್ತಚಂದನ ಗಿಡಗಳನ್ನು ಬೆಳೆಸುವಲ್ಲಿ ಸಹಕರಿಸಿದೆ.

5 ವರ್ಷದೊಳಗಿನ ಹೆಣ್ಣು ಮಗುವಿನ ಪೋಷಕರು ಗಿಡ ನೆಡಲು ತೀರ್ಮಾನಿಸಿದ ಸ್ಥಳದ ಆರ್. ಟಿ.ಸಿ, ಮಗುವಿನ ಭಾವಚಿತ್ರ ಮತ್ತು ಜನನ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ನೀಲಾವರ ಎಳ್ಳಂಪಳ್ಳಿ, ತಡೆಗಲ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಮೀಪದ ಸಂಸ್ಥೆಯ ಕಚೇರಿಯನ್ನು ಜೂ.30ರ ಒಳಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ: 9860705863 ಸಂಪರ್ಕಿಸುವಂತೆ ಸಂಸ್ಥೆಯು ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!