Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಹೆಣ್ಣು ಮಕ್ಕಳಿಗೆ ಉಚಿತ ರಕ್ತಚಂದನ ಗಿಡಗಳ ವಿತರಣೆ ಯೋಜನೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಎಸ್.ಡಿ.ಪಿ. ರೂರಲ್ ಡೆವಲಪ್‍ಮೆಂಟ್ ಸೊಸೈಟಿ ವತಿಯಿಂದ ಹೆಣ್ಣು ಮಕ್ಕಳಿಗೆ ಉಚಿತ ರಕ್ತಚಂದನ ಗಿಡಗಳ ವಿತರಣೆ ಯೋಜನೆ ಹಮ್ಮಿಕೊಳ್ಳಲಾಗಿದೆ.
ಕಳೆದ 10 ವರ್ಷದಿಂದ ಹಸಿರು ಬೆಳೆಸುವ ಮನೋಭಾವದಿಂದ, ಭವಿಷ್ಯದಲ್ಲಿ ಹೆಣ್ಣು ಮಕ್ಕಳು ಆರ್ಥಿಕವಾಗಿ ಸದೃಢರಾಗಬೇಕು ಎನ್ನುವ ಆಶಯದೊಂದಿಗೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸತೀಶ್ ಬಿ. ಶೆಟ್ಟಿ ಕಾಡೂರು ತಿಳಿಸಿದ್ದಾರೆ.


5 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಪೋಷಕರಿಗೆ ಉಚಿತವಾಗಿ 15 ರಕ್ತಚಂದನ ಗಿಡಗಳನ್ನು ವಿತರಿಸಲು ತೀರ್ಮಾನಿಸಿದ್ದು,ಪ್ರತಿ ಮಗುವಿಗೆ ನೀಡುವ ರಕ್ತಚಂದನ ಗಿಡಗಳು ಮುಂದಿನ 15 ವರ್ಷಗಳಲ್ಲಿ ಉತ್ತಮ ಬೆಲೆ ಬಾಳುವ ಮರಗಳಾಗುತ್ತವೆ. ಇದರಿಂದ ಬರುವ ಮೊತ್ತವು ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕೆ ನೆರವಾಗಲಿದೆ.

ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳುವುದರಿಂದ ತನ್ನ ಮಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸುವುದರ ಜತೆಗೆ, ಹಸಿರು ಉಳಿಸುವ ಸಂಸ್ಥೆಯ ಯೋಜನೆಯಲ್ಲಿ ಪಾಲ್ಗೊಂಡಂತಾಗುತ್ತದೆ.
ಸಂಸ್ಥೆಯು ಈಗಾಗಲೇ ಉಡುಪಿ ಜಿಲ್ಲೆಯಾದ್ಯಂತ ನಾನಾ ಭಾಗದ ರೈತರು 300ಎಕರೆ ಜಾಗದಲ್ಲಿ 1,00,000ಕ್ಕೂ ಮಿಕ್ಕಿ ರಕ್ತಚಂದನ ಗಿಡಗಳನ್ನು ಬೆಳೆಸುವಲ್ಲಿ ಸಹಕರಿಸಿದೆ.

5 ವರ್ಷದೊಳಗಿನ ಹೆಣ್ಣು ಮಗುವಿನ ಪೋಷಕರು ಗಿಡ ನೆಡಲು ತೀರ್ಮಾನಿಸಿದ ಸ್ಥಳದ ಆರ್. ಟಿ.ಸಿ, ಮಗುವಿನ ಭಾವಚಿತ್ರ ಮತ್ತು ಜನನ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ನೀಲಾವರ ಎಳ್ಳಂಪಳ್ಳಿ, ತಡೆಗಲ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಮೀಪದ ಸಂಸ್ಥೆಯ ಕಚೇರಿಯನ್ನು ಜೂ.30ರ ಒಳಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ: 9860705863 ಸಂಪರ್ಕಿಸುವಂತೆ ಸಂಸ್ಥೆಯು ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!