Connect with us

Hi, what are you looking for?

ಸಿನಿಮಾ

777 ಚಾರ್ಲಿ ಸಿನಿಮಾ ಲಾಭ ಹಂಚಿಕೊಳ್ಳುವ ನಿರ್ಧಾರ ಪ್ರಕಟಿಸಿದ ರಕ್ಷಿತ್ ಶೆಟ್ಟಿ

1

ಚಂದನವನ : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆ 777 ಚಾರ್ಲಿ ಸಿನಿಮಾ ಸಕತ್ ಸದ್ದು ಮಾಡುತ್ತಿದೆ. ಮನ ಮುಟ್ಟುವ ಕಥಾ ಹಂದರವುಳ್ಳ ಚಾರ್ಲಿಯಲ್ಲಿ ಸಾಮಾಜಿಕ ಸಂದೇಶವೂ ಇದೆ. ನಿನ್ನೆಗೆ 777 ಚಾರ್ಲಿ ಸಿನಿಮಾ 25 ದಿನಗಳನ್ನು ಪೂರೈಸಿದ್ದು, ಚಿತ್ರತಂಡ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದೆ.  

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಕ್ಷಿತ್ ಶೆಟ್ಟಿ, 777 ಚಾರ್ಲಿ ನಿಮ್ಮನ್ನ ತಲುಪಿ 25 ದಿನಗಳು ಕಳೆದರೂ ಎಂದಿನಂತೆ ನಿಮ್ಮಿಂದ ನಮಗೆ ಸಿಗುತ್ತಿರುವ ಪ್ರೀತಿ ಅನನ್ಯ. ಈ ಚಿತ್ರದಿಂದ ನಾವು ಗಳಿಸಿರುವ ಮೆಚ್ಚುಗೆ ಮನ್ನಣೆಯಿಂದ ನಾವು ಅತ್ಯಂತ ಧನ್ಯರಾಗಿದ್ದೇವೆ.

 ಅಲ್ಲದೇ, ಈ ಅಭೂತಪೂರ್ವ ಯಶಸ್ಸಿಗೆ ನಮ್ಮ ತಂಡದ ಪರಿಶ್ರಮವಿದೆ. ಈ ಚಿತ್ರವನ್ನು ಯಶಸ್ವಿಯಾಗಿ ತೆರೆಗೆ ತರುವಲ್ಲಿ ಹಲವಾರು ರೀತಿಯಲ್ಲಿ ಶ್ರಮಿಸಿರುವ ಚಿತ್ರತಂಡದ ಜೊತೆಗೆ 777 ಚಾರ್ಲಿ ಗಳಿಸಿರುವ ಲಾಭದ ಶೇಕಡ 10ರಷ್ಟು ಹಂಚಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ತಿಳಿಸಿದೆ.

Advertisement. Scroll to continue reading.

ಇನ್ನು ಈ ಸಿನಿಮಾದಲ್ಲಿ ಕೇವಲ ಚಿತ್ರತಂಡದವರಿಗೆ ಮಾತ್ರವಲ್ಲದೇ ಶೇಕಡ 5 ರಷ್ಟನ್ನು ನಿರಾಶ್ರಿತ ಶ್ವಾನಗಳ ಮತ್ತು ಮೂಕ ಪ್ರಾಣಿಗಳ ರಕ್ಷಣೆ ಪೋಷಣೆಗೆ ಸಮರ್ಪಿತವಾಗಿ ಕೆಲಸ ಮಾಡುತ್ತಿರುವ ಎನ್ಜಿಓಗಳಿಗೆ ಹಾಗೂ ರೆಸ್ಕ್ಯೂ ಸೆಂಟರ್ ಗಳಿಗೆ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ರಕ್ಷಿತ್ ಶೆಟ್ಟಿಯ ಈ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ಕೇಳಿ ಬರುತ್ತಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!