Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳಾ ಉದ್ಯಮಿಗಳಿಗಾಗಿ ಕಾರ್ಯಗಾರ

1

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಜಿಲ್ಲಾ ಪಂಚಾಯತಿ, ಜಿಲ್ಲಾ ಸಂಪನ್ಮೂಲ ಕೇಂದ್ರ, ರಜತಾದ್ರಿ ಮಣಿಪಾಲ ಇಲ್ಲಿ ಉದ್ಯಮ ವಿಕಾಸ ಪಾಕ್ಷಿಕದ ಅಂಗವಾಗಿ ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳಾ ಉದ್ಯಮಿಗಳಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳೆಯರು ಈಗಾಗಲೇ ಸಣ್ಣ ಪ್ರಮಾಣದ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಕ್ರಮ ಬದ್ದಗೊಳಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯಮ ನೋಂದಣಿ, ಜಿ ಎಸ್ ಟಿ, ಎಫ್ ಎಸ್ ಎಸ್ ಎ ಐ ನೋಂದಣಿ ಮಾಡಿಸಿಕೊಂಡು ಉದ್ಯಮವನ್ನು ಇನ್ನಷ್ಟು ವಿಸ್ತರಣೆಗೊಳಿಸಿ ಯಶಸ್ವಿಯಾಗಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಯೋಜನಾ ನಿರ್ದೇಶಕ ಬಾಬು ಎಂ., ಡಾ. ಪ್ರೇಮಾನಂದ, FSSAI ಅಧಿಕಾರಿ ಅಂಕಿತಾ, ಜಿಲ್ಲಾ ಕಛೇರಿ ಉಡುಪಿ, ಪಿ.ಎಂ ಪಿಂಜಾರ, LDCM, ಲೀಡ್ ಬ್ಯಾಂಕ್, ಉಡುಪಿ ಜಿಲ್ಲೆ, ಜೇಮ್ಸ್ ಡಿ’ಸಿಲ್ವ, ಸಹಾಯಕ ಯೋಜನಾಧಿಕಾರಿ, ಜಿಲ್ಲಾ ಪಂಚಾಯತಿ ಉಡುಪಿ ಇವರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಉದ್ಯಮ್ ರಿಜಿಸ್ಟ್ರೇಷನ್, GST, FSSAI ರಿಜಿಸ್ಟ್ರೇಷನ್ ಹಾಗೂ ಯೋಜನಾ ವರದಿ ತಯಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ನವ್ಯಾ ಕಾರ್ಯಕ್ರಮ ನಿರೂಪಿಸಿದರು. ಮಂಗಳ ಎಸ್. ರಾವ್ ಪ್ರಾರ್ಥನೆ ಗೈದರು, ಜಯಮಾಲಾ ಸ್ವಾಗತಿಸಿದರು. ಸಮಂತ್ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!