Connect with us

Hi, what are you looking for?

Diksoochi News

ಸಿನಿಮಾ

ಕಿಚ್ಚ ಸುದೀಪ ಅವರಿಂದ ವೂಟ್‍ನಲ್ಲಿ ಒಟಿಟಿಯಲ್ಲಿ ಬಿಗ್ ಬಾಸ್ ಮೊದಲ ಆವೃತ್ತಿ ನಡೆಸಿಕೊಡಲು ಸಜ್ಜು!

0

ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್‍ಫಾರಂ ವೂಟ್ 8 ಸೀಸನ್‍ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ.

ಈ ಕಾರ್ಯಕ್ರಮ ಪ್ರಾರಂಭ ಕುರಿತು ಕಿಚ್ಚ ಸುದೀಪ, “ಉತ್ಸಾಹಕರ 8 ಋತುಗಳನ್ನು ಆಯೋಜಿಸಿದ ನಂತರ ಬಿಗ್ ಬಾಸ್ ಕನ್ನಡ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಈ ವರ್ಷ ಮೊಟ್ಟಮೊದಲನೆಯ ಒಟಿಟಿ ಆವೃತ್ತಿಯ ಮೂಲಕ ಮನರಂಜನೆಯಲ್ಲಿ ಕಥೆಗೆ ಟ್ವಿಸ್ಟ್ ತರಲು ಬಹಳ ಸಂತೋಷ ಹೊಂದಿದ್ದೇವೆ. ನಾವು ವೂಟ್‍ನಲ್ಲಿ ಈ ಶೋ ಪ್ರದರ್ಶನಕ್ಕೆ ಸಜ್ಜಾಗಿದ್ದು ನಾನು ವೀಕ್ಷಕರಿಗೆ 24/7 ಲೈವ್ ಆಕ್ಷನ್, ಆಸಕ್ತಿದಾಯಕ ಸಂವಹನಗಳು ಮತ್ತು ಪ್ಲಾಟ್ ಟ್ವಿಸ್ಟ್ ಗಳನ್ನು ವೀಕ್ಷಕರಿಗೆ ತರಲು ಉತ್ಸುಕನಾಗಿದ್ದೇನೆ. ಇದು ನಮ್ಮ ವೀಕ್ಷಕರನ್ನು ಸೆಳೆಯುತ್ತದೆ ಎಂಬ ಭರವಸೆ ನನ್ನದು” ಎಂದರು.

ಬಿಗ್ ಬಾಸ್ ಕನ್ನಡ ಹಿಂದಿನ ವರ್ಷಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದೆ. ಈ ಸರಣಿಯಲ್ಲಿ ಆಸಕ್ತಿದಾಯಕ ಅಭ್ಯರ್ಥಿಗಳು ಮತ್ತು ಅವರ ಏರಿಳಿತಗಳನ್ನು ಕಾಣುವುದಲ್ಲದೆ ರಿಯಾಲಿಟಿ ಟಿ.ವಿ. ವಿಭಾಗದಲ್ಲಿ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾಗಿಸಿದೆ. ಅನಿಯಮಿತ ನಾಟಕೀಯತೆ ಮತ್ತು ಮನರಂಜನೆ ಹೊಂದಿರುವ ವೂಟ್‍ನ ಒಟಿಟಿಯಲ್ಲಿ ಪ್ರಸಾರವಾಗಲಿರುವ ಇದು ಮನರಂಜನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಭರವಸೆ ನೀಡುತ್ತದೆ!

ಆಗಸ್ಟ್ ನಲ್ಲಿ ವೂಟ್‍ನಲ್ಲಿ ವಿಶೇಷವಾಗಿ ಒಟಿಟಿ ಆವೃತ್ತಿ ವೀಕ್ಷಿಸಲು ಸಜ್ಜಾಗಿರಿ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಮಂಗಳೂರು : ನಾಲ್ಕೂವರೆ ತಿಂಗಳ ಹಸುಗೂಸನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಮೃತಪಟ್ಟವರು....

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ಜ್ಯೋತಿಷ್ಯ

1 ದಿನಾಂಕ : ೦೪-೧೨-೨೩, ವಾರ: ಭಾನುವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಷಷ್ಠಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

ರಾಷ್ಟ್ರೀಯ

0 ಛತ್ತೀಸ್‌ಗಢ : ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಅಚ್ಚರಿಯ ಗೆಲುವಾಗಿದ್ದರೆ, ಮತ್ತೊಂದೆಡೆ ಸೇಡಿನ ಗೆಲುವೊಂದು ಈ ಕ್ಷೇತ್ರದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ತನ್ನ ಮಗನ ಸಾವಿನ ವಿರುದ್ಧ ಸೇಡು...

error: Content is protected !!