Connect with us

Hi, what are you looking for?

Diksoochi News

ಸಿನಿಮಾ

ಕುಸಿದು ಬಿದ್ದು ಜನಪ್ರಿಯ ಕಿರುತೆರೆ ನಟ ದೀಪೇಶ್ ಭಾನ್ ನಿಧನ

4

ಕಿರುತೆರೆ : ಜನಪ್ರಿಯ ನಟ ದೀಪೇಶ್ ಭಾನ್ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

‘ಭಾಬಿ ಜಿ ಘರ್ ಪರ್ ಹೈ’ ಧಾರಾವಾಹಿಯ ಅವರ ಪಾತ್ರ ಜನಪ್ರಿಯವಾಗಿತ್ತು. ಈ ಧಾರಾವಾಹಿಯ ಸಹಾಯಕ ನಿರ್ದೇಶಕ ವೈಭವ್ ಮಾಥುರ್ ದೀಪೇಶ್ ಭಾನ್ ಸಾವಿನ ಬಗ್ಗೆ ಖಚಿತ ಪಡಿಸಿದ್ದಾರೆ.

‘ಎಫ್‌ಐಆರ್’ ಟಿವಿ ಶೋ ಖ್ಯಾತಿಯ ನಟಿ ಕವಿತಾ ಕೌಶಿಕ್ ಅವರೂ ದೀಪೇಶ್ ಭಾನ್ ಅವರ ಸಾವಿನ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು ಸಂತಾಪ ಸೂಚಿಸಿದ್ದಾರೆ. ನಿನ್ನೆ 41 ನೇ ವಯಸ್ಸಿನಲ್ಲಿ ದೀಪೇಶ್ ಭಾನ್ ನಿಧನರಾದ ಸುದ್ದಿಯಿಂದ ಆಘಾತಗೊಂಡಿದ್ದೇನೆ, ಎಫ್.ಐ.ಆರ್.ನ ಅತ್ಯಂತ ಪ್ರಮುಖ ಪಾತ್ರಧಾರಿ, ಎಂದಿಗೂ ಕುಡಿಯದ / ಧೂಮಪಾನ ಮಾಡದ ಅಥವಾ ತನ್ನ ಆರೋಗ್ಯಕ್ಕೆ ಹಾನಿ ಮಾಡುವ ಯಾವುದೇ ಕೆಲಸವನ್ನು ಮಾಡದ, ಹೆಂಡತಿ ಮತ್ತು ಒಂದು ವರ್ಷದ ಮಗು ಮತ್ತು ಪೋಷಕರು ಮತ್ತು ನಮ್ಮೆಲ್ಲರನ್ನು ಬಿಟ್ಟುಹೋದ ಫಿಟ್ ವ್ಯಕ್ತಿ ಎಂದು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.

ಕಳೆದ ವರ್ಷ ದೀಪೇಶ್ ಅವರ ತಾಯಿ ಇಹಲೋಕ ತ್ಯಜಿಸಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!