ಬೆಂಗಳೂರು : ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕನ್ನಡಿಗ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣ ಗೌಡ 8 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಿಸಿದ್ದಾರೆ.
ಪುರುಷರ 61 ಕೆಜಿ ವಿಭಾಗದಲ್ಲಿ ಕುಂದಾಪುರ ಮೂಲದ ವೇಟ್ಲಿಫ್ಟರ್ ಗುರುರಾಜ ಪೂಜಾರಿ ಇಂದು ಕಂಚಿನ ಪದಕ ಗೆದ್ದಿದ್ದಾರೆ.
ಈ ಪದಕದೊಂದಿಗೆ ಭಾರತಕ್ಕೆ ಎರಡನೇ ಪದಕವನ್ನು ಗುರುರಾಜ ನೀಡಿದ್ದಾರೆ. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಗೆದ್ದಿದ್ದರು.
Advertisement. Scroll to continue reading.