ಕಾಪು : ಶ್ರಮಜೀವಿಗಳಾದ ಮೀನುಗಾರರ ಸುರಕ್ಷತೆಗೆ ರಾಜ್ಯ ಸರಕಾರವು ಒತ್ತು ನೀಡುತ್ತಿದೆ. ಕೈಗಾರಿಕೆ, ಉದ್ದಿಮೆಯ ಸ್ವರೂಪವನ್ನು ಹೊಂದಿರುವ ಮೀನುಗಾರಿಕೆಯ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸರಕಾರವು ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯುಡಿಯೂರಪ್ಪ ಹೇಳಿದರು.
ಅವರು ಹೆಜಮಾಡಿ ಕೋಡಿಯಲ್ಲಿ ಮಂಗಳವಾರ 180.84ಕೋಟಿ ರೂ. ಗಳ ಕೇಂದ್ರ ಹಾಗೂ ರಾಜ್ಯಗಳ ಸಮಪಾಲಿನ ಯೋಜನೆಯಾದ ಹೆಜಮಾಡಿಯ ಸರ್ವಋತು ಮೀನುಗಾರಿಕಾ ಬಂದರಿಗೆ ಶಂಕುಸ್ಥಾಪನಗೈದು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯವು 320ಕಿಮೀ ಕರಾವಳಿ ತೀರ ಮತ್ತು 8000ಹೆಕ್ಟೇರ್ಗೂ ಅಧಿಕ ಹಿನ್ನೀರಿನ ಪ್ರದೇಶ ಹೊಂದಿದ್ದು ದೇಶದ ಮೀನುಗಾರಿಕಾ ವಲಯಕ್ಕೆ ಗಣನೀಯ ದೇಣಿಗೆಯನ್ನೀಯುತ್ತಿದೆ. ಮೀನುಗಾರಿಕೆಯು ಪೌಷ್ಟಿಕ ಆಹಾರ, ವಿದೇಶೀ ವಿನಿಮಯ ಹಾಗೂ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಿರುವುದರಿಂದ ರಾಜ್ಯ ಆರ್ಥಿಕ ಪ್ರಗತಿಯಲ್ಲೂ ಹೆಚ್ಚಿನ ಕೊಡುಗೆಯನ್ನು ನೀಡುತ್ತಿವೆ ಎಂದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಂದರು ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯೋಜನೆಯ ಕುರಿತಾಗಿ ಪ್ರಸ್ತಾವಿಸಿದರು.
ವೇದಿಕೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಉಡುಪಿ ಶಾಸಕ ರಘುಪತಿ ಭಟ್, ಮೂಲ್ಕಿ – ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿ. ಪಂ. ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದಶರ್ಿ ಜೀವರಾಜ್, ಕಾಪು ತಾ. ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಉಡುಪಿ ಜಿಲ್ಲಾಕಾರಿ ಜಿ. ಜಗದೀಶ್, ಉಡುಪಿ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಡಾ| ವೈ. ನವೀನ್ ಭಟ್, ಮೀನುಗಾರಿಕಾ ನಿರ್ದೇಶಕ ರಾಮಾಚಾರ್ಯ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದ.ಕ., ಉಡುಪಿ ಸಹಕಾರಿ ಮೀನು ಮಾರಾಟ ಮಹಾ ಮಂಡಲದ ಅಧ್ಯಕ್ಷ ಯಶ್ಪಾಲ್ ಸುವರ್ಣ, ಉಡುಪಿ ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕೃಷಿ ಸ್ಥಾಯಿ ಸಮಿತಿಯ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾ. ಪಂ. ಸದಸ್ಯೆ ರೇಣುಕಾ ಪುತ್ರನ್, ಮೀನುಗಾರ ಮುಖಂಡ ಡಾ| ಜಿ. ಶಂಕರ್, ಆನಂದ ಸಿ. ಕುಂದರ್, ಸದಾಶಿವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಮೊಗವೀರರ ಪರವಾಗಿ ಮುಖ್ಯಮಂತ್ರಿ ಬಿ, ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.
ಕೃಷಿ ಹಾಗೂ ಮೀನುಗಾರಿಕಾ ಇಲಾಖೆಯ ಮುಖ್ಯ ಅಪರ ಕಾರ್ಯದರ್ಶಿ ಡಾ| ಜಿ. ಕಲ್ಪನಾ ಸ್ವಾಗತಿಸಿದರು. ನಾಗರಾಜ್ ಜಿ. ಎಸ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ವರದಿ : ಶಫೀ ಉಚ್ಚಿಲ