ರಾಯಚೂರು : ಮಂತ್ರಾಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವೃದ್ಧ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲ್ಲೂಕಿನ ಪಿಡಬ್ಲುಡಿ ಕ್ಯಾಂಪ್ ಬಳಿ ನಡೆದಿದೆ. ಸತ್ಯನಾರಾಯಣ (63) ಹಾಗೂ ರಮಾದೇವಿ (50) ದಂಪತಿ ಗಂಭೀರ ಗಾಯಗೊಂಡವರು.
ಸಂಬಂಧಿ ಶ್ರೀದೇವಿ ಹಾಗೂ ಕಾರು ಚಾಲಕ ಸತ್ಯನಾರಾಯಣಗೂ ಗಾಯವಾಗಿದೆ. ಕಾರ್ನಲ್ಲಿದ್ದ ಇನ್ನಿಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳು ಮೂಲತಃ ಸಿಂಧನೂರು ತಾಲ್ಲೂಕಿನ ಪಗಡದಿನ್ನಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕುಟುಂಬ ಸಮೇತರಾಗಿ ಮಂತ್ರಾಲಯ ರಾಯರ ದರ್ಶನಕ್ಕೆ ಹೋಗಿದ್ದ ವಾಪಾಸ್ ಬರುತ್ತಿದ್ದರು. ನಿನ್ನೆ ತಡರಾತ್ರಿ ದುರ್ಘಟನೆ ನಡೆದಿದೆ.
ಮಂತ್ರಾಲಯದಿಂದ ವಾಪಾಸ್ ಬರುತ್ತಿದ್ದ ವೇಳೆ ತಡರಾತ್ರಿ ರಸ್ತೆ ಮಧ್ಯೆ ನಾಯಿ ಅಡ್ಡ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸತ್ಯನಾರಾಯಣ ಹಾಗೂ ರಮಾದೇವಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.