Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ೭ನೇ ದಿನಕ್ಕೆ ಕಾಲಿಟ್ಟ ವಾಹನಗಳ ಮುಷ್ಕರ; ರಸ್ತೆಯಿಂದ ಲಾರಿಗಳ ತೆರವು

0

ವರದಿ : ಬಿ.ಎಸ್.ಆಚಾರ್ಯ


ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು ೭ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ.


ಈ ನಡುವೆ ಶಾಂತಿಯುತವಾಗಿ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಸಾಲಾಗಿ ನಿಲ್ಲಿಸಿದ ಲಾರಿಗಳನ್ನು ಪ್ರತೀ ದಿನ ರಾತ್ರಿ ಇಲ್ಲಿನ ಖಾಸಗಿ ಜಾಗವೊಂದರಲ್ಲಿ ನಿಲ್ಲಿಸಿ ಬೆಳಿಗ್ಗೆ ಪುನ: ರಸ್ತೆಯಲ್ಲಿ ಇರಿಸುವ ಕ್ರಮಕ್ಕೆ ಭಾನುವಾರ ಪೊಲೀಸರು ನಿಲುಗಡೆ ಮಾಡಲಾದ ಪ್ರತೀ ಲಾರಿ ಟೆಂಪೋಗಳಿಗೆ ರಸ್ತೆಯಲ್ಲಿ ನಿಲ್ಲಿಸದಂತೆ ಸೂಚನಾ ಪತ್ರವನ್ನು ಹಾಕಿದ್ದಾರೆ.

Advertisement. Scroll to continue reading.


ಸೋಮವಾರ ಬೆಳಿಗ್ಗೆ ಮುಷ್ಕರ ನಿರತರಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ನಡೆಸಿ ಮುಷ್ಕರ ಮುಂದುವರಿಸಿದರು. ಬಳಿಕ ಕೋಟದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ಮಾತು ಕತೆ ನಡೆಸಿದರು.


ಟಿಪ್ಪರ್ ಮಾಲಕರ ಸಂಘದ ವಿಜಯ ಕುಮಾರ್ , ಸುಧಾಕರ ಶೆಟ್ಟಿ, ಮಟಪಾಡಿ ವಿಶ್ವನಾಥ್ ಶೆಟ್ಟಿ , ಸುಮತಿ ಸಂತೋಷ್ ಬಿರ್ತಿ , ಹಂಮಜಾ ಮುಷ್ಕರದ ನೇತೃತ್ವ ವಹಿಸಿದ್ದು ಕಾರ್ಮಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮುಷ್ಕರದಲ್ಲಿದ್ದಾರೆ.


ಅ.3 ರಂದು ರಾಜ್ಯ ಪಾಲರ ಜಿಲ್ಲಾ ಪ್ರವಾಸ ಇರುವ ಕಾರಣ ರಸ್ತೆ ಬದಿಯಲ್ಲಿ ಇರಿಸಲಾದ ಲಾರಿ ಟೆಂಪೋಗಳನ್ನು ತೆರವು ಮಾಡಿಸಲು ಇಲಾಖೆಯ ಸೂಚನೆ ಬಂದ ಕಾರಣ ತೆರವು ಮಾಡಲಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾ ಮೂಲಗಳು ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ರಾಷ್ಟ್ರೀಯ

0 ನವದೆಹಲಿ : ಎರಡು ವರ್ಷಗಳಿಂದ ನಿಷ್ಕ್ರಿಯವಾಗಿರುವ ವೈಯಕ್ತಿಕ ಖಾತೆಗಳನ್ನು ಗೂಗಲ್ ಈ ವಾರದಿಂದ ಡಿಲೀಟ್‌ ಮಾಡುತ್ತಿದೆ. ಟೆಕ್ ದೈತ್ಯ ಈ ವರ್ಷದ ಮೇ ತಿಂಗಳಲ್ಲಿ ನೀತಿಯನ್ನು ಘೋಷಣೆ ಮಾಡಿತ್ತು. ಕಂಪನಿಯು Google Workspace...

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

error: Content is protected !!