Connect with us

Hi, what are you looking for?

Diksoochi News

Uncategorized

ಶ್ರೀ ಮೂಕಾಂಬಿಕೆಗೆ ಚಿನ್ನದ ನಾಗಾಭರಣ ಸಮರ್ಪಿಸಿದ ಬೆಂಗಳೂರು ಉದ್ಯಮಿ

0


ಕುಂದಾಪುರ: ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ವಿಜಯ ಕುಮಾರ್ ರೆಡ್ಡಿ ಎನ್ನುವರು ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಚಿನ್ನದ ಲೇಪನವುಳ್ಳ 12 ಲಕ್ಷ ಮೌಲ್ಯದ ನಾಗಾಭರಣವನ್ನು ಹರಕೆ ರೂಪದಲ್ಲಿ ಸಮರ್ಪಿಸಿದರು‌.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭಾನುವಾರ ಬೆಳಿಗ್ಗೆ ಪತ್ನಿ ಸುಧಾ ವಿಜಯ್ ಕುಮಾರ್, ಪುತ್ರ ಅಕ್ಷಯ್ ಜೊತೆ ಆಗಮಿಸಿ ಹರಕೆ ಸಮರ್ಪಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, 40-45 ವರ್ಷದಿಂದ ಮೂಕಾಂಬಿಕೆ ದೇವಿಯ ಭಕ್ತನಾಗಿದ್ದು ತಂದೆಯವರ ಕಾಲದಿಂದಲೂ ಸನ್ನಿಧಿಗೆ ಆಗಮಿಸುತ್ತಿದ್ದೇವೆ. ದೇವಿ ಆಶೀರ್ವಾದದಿಂದ ಪುತ್ರ ಪ್ರಾಪ್ತಿ ಸೇರಿದಂತೆ ಹಲವು ಇಷ್ಟಾರ್ಥಗಳು ನೆರವೇರಿತ್ತು. ಅದಕ್ಕಾಗಿ ದೇವಿಗೆ ಹರಕೆ ರೂಪದಲ್ಲಿ ನಾಗಾಭರಣವನ್ನು ಸಲ್ಲಿಸಿದ್ದೇನೆ ಎಂದರು.

ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಉಪಸ್ಥಿತಿಯಲ್ಲಿ ನಾಗಾಭರಣ ಸಮರ್ಪಣೆ ಮಾಡಿದ್ದು ಮಂಗಳೂರು ಮೂಲದ ಪ್ರಕಾಶ್ ಆಚಾರ್ಯ ನಾಗಾಭರಣ ನಿರ್ಮಿಸಿದ್ದಾರೆ.

ನಾಗಾಭರಣ ಸಮರ್ಪಣೆ ಸಂದರ್ಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಮ್ಯಾನೇಜರ್ ರಾಮಕೃಷ್ಣ ಅಡಿಗ, ಪಿ.ಆರ್.ಒ ಜಯಕುಮಾರ್, ಅರ್ಚಕ ಗೋವಿಂದ ಅಡಿಗ, ಕ್ಷೇತ್ರ ಪುರೋಹಿತರಾದ ಕಾಳಿದಾಸ ಭಟ್, ಸುರೇಶ್ ಭಟ್, ನರಸಿಂಹ ಭಟ್ ಉಪಸ್ಥಿತರಿದ್ದರು.

Advertisement. Scroll to continue reading.

ವರದಿ : ದಿನೇಶ್ ರಾಯಪ್ಪನಮಠ

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!