ಮಂಗಳೂರು : ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯವರಾದ ಸೋಮನ ಗೌಡ ಚೌಧರಿ (31) ಮೃತಪಟ್ಟ ದುರ್ದೈವಿ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಲ್ಲಿ ವಯರ್ವೆಲ್ ಇನ್ಸ್ಪೆಕ್ಟರ್ ವಾಹನಕ್ಕೆ ಇವರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವರು ಡೆಂಘೀ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ನಗರದ ಫಳ್ನಿರ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಗ್ಗೆ ಕರೆದುಕೊಂಡು ಹೋಗಲಾಗಿತ್ತು.
ಅವರನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನ ಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಧಾವಿಸಿ 112ಕ್ಕೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಹೋಗುತ್ತಿರಬೇಕಾದರೆ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ.
ವಿವಾಹಿತರಾಗಿರುವ ಸೋಮನ ಗೌಡ ಕಳೆದ 7 ವರ್ಷಗಳಿಂದ ನಗರ ಸಶಸ್ತ್ರ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸ್ವಂತ ಹಣದಿಂದ ಬಡವರಿಗೆ ಸೋಮನಗೌಡ ರೇಷನ್ ಹಂಚಿ ಮೆಚ್ಚುಗೆ ಗಳಿಸಿದ್ದರು. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.