Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಐರನ್ ಡೋಮ್ ಬಳಿಕ ಈಗ ಐರನ್ ಬೀಮ್; ಏನಿದು ಹಮಾಸ್ ವಿರುದ್ಧ ಇಸ್ರೇಲ್ ವೆಪನ್?

1

ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ಇಸ್ರೇಲ್‌ನ ರಕ್ಷಣಾ ಪಡೆ ಯದ್ಧಕ್ಕಾಗಿ ಲೇಸರ್ ಶಸ್ತ್ರಾಸ್ತ್ರವನ್ನು ಬಳಕೆ ಮಾಡಲು ಯೋಜಿಸಿರುವ ಬಗ್ಗೆ ವರದಿಯಾಗಿದೆ.

ಇಲ್ಲಿಯವರೆಗೆ ಇಸ್ರೇಲ್ ಐರನ್ ಡೋಮ್ ಅನ್ನು ಬಳಸುತ್ತಿತ್ತು. ಇದೀಗ ಇಸ್ರೇಲ್ ಐರನ್ ಬೀಮ್ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದು ವೇಗವಾಗಿ ತನ್ನತ್ತ ಚಲಿಸುವ ಕ್ಷಿಪಣಿ ಅಥವಾ ಸ್ಫೋಟಕಗಳನ್ನು ಶಕ್ತಿಯುತ ಲೇಸರ್ ಕಿರಣಗಳಿಂದ ನಾಶಪಡಿಸುವ ವ್ಯವಸ್ಥೆಯಾಗಿದೆ.

ಐರನ್ ಬೀಮ್ ಅನ್ನು 2025 ರಲ್ಲಿ ಇಸ್ರೇಲ್‌ನಲ್ಲಿ ಅಳವಡಿಸಲು ಯೋಜಿಸಲಾಗಿತ್ತು. ಆದರೆ ಇದೀಗ ಹಮಾಸ್ ಉಗ್ರರೊಂದಿಗೆ ಭೀಕರ ಯುದ್ಧ ಆರಂಭವಾಗಿರುವ ಹಿನ್ನೆಲೆ ಇಸ್ರೇಲಿ ರಕ್ಷಣಾ ಸಚಿವಾಲಯ ಅದನ್ನು ಶೀಘ್ರವಾಗಿ ನಿಯೋಜಿಸಲು ಯೋಜಿಸಿದೆ.

Advertisement. Scroll to continue reading.

ಇಸ್ರೇಲಿ ಪಡೆಗಳು ಈಗ ಐರನ್ ಬೀಮ್‌ನ ನಿಯೋಜನೆಯನ್ನು ವೇಗಗೊಳಿಸುತ್ತಿವೆ ಮತ್ತು ಪರೀಕ್ಷೆಗಳನ್ನು ಪ್ರಾರಂಭಿಸುತ್ತಿವೆ ಎಂದು ಇಸ್ರೇಲ್‌ನ ಸ್ಥಳೀಯ ಮಾಧ್ಯಮ ವರದಿ ಮಾಡಿವೆ.

ಐರನ್ ಬೀಮ್ ಎಂದರೆ:


ಐರನ್ ಬೀಮ್ ಅನ್ನು ಮೊದಲ ಬಾರಿಗೆ 2014 ರಲ್ಲಿ ಅನಾವರಣಗೊಳಿಸಲಾಯಿತು. ಆದರೆ ಇಸ್ರೇಲ್‌ನಲ್ಲಿ ಇದನ್ನು ಇನ್ನೂ ಅಳವಡಿಸಲಾಗಿಲ್ಲ. ರಾಫೆಲ್ ಅಡ್ವಾನ್ಸ್ಡ್ ಡಿಫೆನ್ಸ್ ಸಿಸ್ಟಮ್ಸ್ ನಿರ್ಮಿಸಿದ ಐರನ್ ಬೀಮ್ ಸಿಸ್ಟಮ್ ಶಸ್ತ್ರಾಸ್ತ್ರ ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಅದು ಶಕ್ತಿಯುತ ಬೆಳಕಿನ ಕಿರಣಗಳನ್ನು ಹಾಯಿಸುವ ಮೂಲಕ ಶತ್ರುಗಳ ಕ್ಷಿಪಣಿ ಅಥವಾ ಅಸ್ತ್ರಗಳನ್ನು ನಾಶಪಡಿಸುತ್ತದೆ. ಐರನ್ ಡೋಮ್ ರಾಫೆಲ್ ಅಡ್ವಾನ್ಸ್ಡ್ ಡಿಫೆನ್ಸ್ ಸಿಸ್ಟಮ್ಸ್ ಮತ್ತು ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ ನಿರ್ಮಿಸಿದ ಇಸ್ರೇಲಿ ಮೊಬೈಲ್ ಆಲ್-ವೆದರ್ ಏರ್ ಡಿಫೆನ್ಸ್ ಸಿಸ್ಟಮ್ ಆಗಿದೆ. 

ಐರನ್ ಡೋಮ್‌ಗಿಂತ ಐರನ್ ಬೀಮ್ ಹೇಗೆ ಕೆಲಸ ಮಾಡುತ್ತೆ?

Advertisement. Scroll to continue reading.

ಐರನ್ ಡೋಮ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯೊಂದಿಗೆ ಕೆಲಸ ಮಾಡಲು ಐರನ್ ಬೀಮ್ ಅನ್ನು ಅಗ್ಗದ ಮತ್ತು ಹೊಂದಿಕೊಳ್ಳುವ ಪರ್ಯಾಯವೆಂದು ಪರಿಗಣಿಸಲಾಗಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದ ಕ್ಷಿಪಣಿ ರಕ್ಷಣಾ ತಜ್ಞರ ಪ್ರಕಾರ ಐರನ್ ಡೋಮ್‌ನಿಂದ ಹಾರಿಸಲಾಗುವ ಪ್ರತಿ ಪ್ರತಿಬಂಧಕಗಳ ಬೆಲೆ 60,000 ಡಾಲರ್ ವೆಚ್ಚವಾಗುತ್ತದೆ. ಆದರೆ ಐರನ್ ಬೀಮ್ ಅಗ್ಗದ ಬೆಲೆಯಲ್ಲಿ ಲೇಸರ್ ಕಿರಣವನ್ನು ಕಳುಹಿಸಿ, ದಾಳಿಯನ್ನು ತಡೆಯಬಹುದು. ಐರನ್ ಬೀಮ್ ಐರನ್ ಡೋಮ್‌ಗಿಂತ ಚಿಕ್ಕದು ಮತ್ತು ಹಗುರವೂ ಆಗಿದೆ. ಇದನ್ನು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಾಗಿಸಲು ಹಾಗೂ ಮರೆಮಾಡಲು ಸುಲಭವಾಗುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!