Connect with us

Hi, what are you looking for?

Diksoochi News

ರಾಷ್ಟ್ರೀಯ

ಅರಬ್ಬಿ ಸಮುದ್ರದಲ್ಲಿ ‘ತೇಜ್’ ಚಂಡಮಾರುತದ ಭೀತಿ

1

ಹೊಸ ದಿಲ್ಲಿ : ಅರಬ್ಬಿ ಸಮುದ್ರದಲ್ಲಿ ‘ತೇಜ್’ ಚಂಡಮಾರುತ ಅಬ್ಬರಿಸಲು ಆರಂಭವಾಗಿದೆ. ಇದು ಒಮನ್ ದೇಶದ ದಕ್ಷಿಣ ತೀರ ಹಾಗೂ ಯೆಮನ್ ದೇಶಗಳತ್ತ ಸಾಗುತ್ತಿದ್ದು, ಕೆಲವೇ ದಿನಗಳಲ್ಲಿ ತೀವ್ರತೆ ಪಡೆದುಕೊಳ್ಳುವ ಆತಂಕ ಸೃಷ್ಟಿಯಾಗಿದೆ. ಅರಬ್ಬಿ ಸಮುದ್ರದ ಕೇಂದ್ರ ಭಾಗದಲ್ಲಿ ಉಂಟಾಗಿರುವ ಈ ಚಂಡಮಾರುತ ಯೆಮನ್ ಹಾಗೂ ಒಮನ್‌ನ ವಿರುದ್ಧ ದಿಕ್ಕಿನಲ್ಲಿ ಸಾಗಿದರೆ ಭಾರತದತ್ತ ಆಗಮಿಸುವ ಸಾಧ್ಯತೆಯೂ ಇದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪ್ರತಿಕೂಲ ವಾತಾವರಣ ಸೃಷ್ಟಿಗೆ ಕಾರಣವಾಗಲಿದೆ. ಈ ಚಂಡಮಾರುತಕ್ಕೆ ‘ತೇಜ್‌’ ಎಂದು ಹೆಸರಿಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ಎರಡನೇ ಚಂಡಮಾರುತ ಇದಾಗಿದೆ.


ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಶನಿವಾರ ಬೆಳಗ್ಗೆ ವೇಳೆಗೆ ತೇಜ್ ಚಂಡಮಾರುತ ಬಿರುಸಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ನೈರುತ್ಯ ಹಾಗೂ ಆಗ್ನೇಯ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಈ ಚಂಡಮಾರುತ ಸೃಷ್ಟಿಯಾಗಿದೆ. ಸದ್ಯದ ಮಟ್ಟಿಗೆ ಈ ಚಂಡ ಮಾರುತ ಯೆಮನ್ ಹಾಗೂ ಒಮನ್ ಕಡಲ ತೀರಗಳತ್ತ ಸಾಗುತ್ತಿದೆಯಾದರೂ ಯಾವುದೇ ಕ್ಷಣದಲ್ಲೂ ಚಂಡಮಾರುತದ ದಿಕ್ಕು ಬದಲಾಗಬಹುದಾಗಿದೆ.

Advertisement. Scroll to continue reading.

ಶನಿವಾರ ಸಂಜೆ ಹಾಗೂ ಭಾನುವಾರದ ವೇಳೆಗೆ ಈ ಚಂಡ ಮಾರುತ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಂದಾಜಿಸಿದೆ. ಒಮನ್‌ನ ದಕ್ಷಿಣ ಕಡಲ ತೀರದಿಂದ ಯೆಮನ್ ದೇಶಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ.

ಆದರೆ ಕೆಲವೊಮ್ಮೆ ಚಂಡ ಮಾರುತಗಳು ತಮ್ಮ ದಿಕ್ಕನ್ನು ಬದಲಿಸುವ ಸಾಧ್ಯತೆ ಇದೆ. ಹೀಗಾಗಿ, ಸದ್ಯದ ಅಂದಾಜುಗಳ ಪ್ರಕಾರ, ಭಾರತ ಉಪ ಖಂಡಕ್ಕೆ ಈ ಚಂಡಮಾರುತದ ಭೀತಿ ಇಲ್ಲವಾದರೂ ಚಂಡ ಮಾರುತದ ದಿಕ್ಕು ಮುಂದಿನ ದಿನಗಳಲ್ಲಿ ಯಾವ ಕಡೆಗೆ ಬದಲಾಗಬಹುದು ಅನ್ನೋ ಅಂದಾಜು ಮಾಡುವುದು ಕಷ್ಟಕರವಾಗಿದೆ. ಇನ್ನು, ಚಂಡಮಾರುತ ಸೃಷ್ಟಿಯಾದರೆ ಗಾಳಿಯ ವೇಗವು ಗಂಟೆಗೆ 62ರಿಂದ 88 ಕಿ.ಮೀ. ವೇಗದಲ್ಲಿ ಬೀಸಲಿದೆ. ಒಂದು ವೇಳೆ ತೀವ್ರತೆ ಪಡೆದರೆ ಗರಿಷ್ಠ 89ರಿಂದ 117 ಕಿ.ಮೀ. ವೇಗದಲ್ಲಿ ಬೀಸಲಿದೆ.‌

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

error: Content is protected !!