Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಮಹಿಳೆಯರ ಮೇಲೆ ಸಂಗಾತಿಯಿಂದ ಅವಹೇಳನಕಾರಿ ಹೇಳಿಕೆ; ಸಂಬಂಧ ಮುರಿದುಕೊಂಡ ಇಟಲಿ ಪ್ರಧಾನಿ

1

ರೋಮ್: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರು ತಮ್ಮ ಸಹಜೀವನ ಸಂಗಾತಿ ಆಂಡ್ರಿಯಾ ಗಿಯಾಂಬ್ರುನೊ ಅವರಿಂದ ದುರವಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. ಕಳೆದ ಹತ್ತು ವರ್ಷಗಳ ತಮ್ಮ ಸಂಬಂಧ ಕೊನೆಗೊಂಡಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಟಿವಿ ಪತ್ರಕರ್ತನಾಗಿರುವ ಗೆಳೆಯ ಆಂಡ್ರಿಯಾ ಗಿಯಾಂಬ್ರುನೊ ಅವರು ಇತ್ತೀಚಿನ ಟಿವಿ ಶೋವೊಂದರಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ ಹಿನ್ನೆಲೆಯಲ್ಲಿ ಆಂಡ್ರಿಯಾ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುತ್ತಿರುವುದಾಗಿ ಪ್ರಧಾನಿ ಮೆಲೋನಿ ಬಹಿರಂಗಪಡಿಸಿದ್ದಾರೆ.

“ಆಂಡ್ರಿಯಾ ಗಿಯಾಂಬ್ರುನೊ ಅವರೊಂದಿಗಿನ ನನ್ನ ಹತ್ತು ವರ್ಷಗಳ ಸಂಬಂಧ ಕೊನೆಗೊಂಡಿದೆ. ಕಾಲಕ್ಕೆ ತಕ್ಕಂತೆ ನಾವು ಸಾಗುವ ನಮ್ಮಿಬ್ಬರ ಹಾದಿಗಳು ಬದಲಾಗಿವೆ. ಅದನ್ನು ಗುರುತಿಸುವ ಸಮಯ ಬಂದಿದೆ’ ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ.

Advertisement. Scroll to continue reading.

ಕೋಲಾಹಲ ಸೃಷ್ಠಿಸಿದ್ದ ಆಂಡ್ರಿಯಾ ಹೇಳಿಕೆ :

ಕೆಲವು ತಿಂಗಳ ಹಿಂದೆ, ದೇಶದಲ್ಲಿ ಬೆಳಕಿಗೆ ಬಂದ ಸಾಮೂಹಿಕ ಅತ್ಯಾಚಾರ ಘಟನೆಗಳ ಬಗ್ಗೆ ಆಂಡ್ರಿಯಾ ನೀಡಿದ್ದ ಹೇಳಿಕೆ ವಿಶ್ವದಾದ್ಯಂತ ಕೋಲಾಹಲ ಸೃಷ್ಠಿಸಿತ್ತು. ಟಿವಿ ಚಾನೆಲ್‌ನೊಂದಿಗೆ ಮಾತನಾಡುತ್ತಾ, ಗಿಯಾಂಬ್ರುನೋ , ನೀವು ಮೋಜು ಮಸ್ತಿ ಮಾಡಲು ಹೋದಾಗ, ನೀವು ಸಿಕ್ಕಾಪಟ್ಟೆ ಕುಡಿಯುತ್ತೀರಿ. ನಿಮಗೆ ಕುಡಿಯುವ ಹಕ್ಕಿದೆ, ಆದರೆ ಅಷ್ಟೊಂದು ಕುಡಿದಾಗ ಇಂತಹ ತೊಂದರೆಗೆ ಸಿಲುಕುತ್ತೀರಿ, ಕುಡಿತು ಪ್ರಜ್ಞೆ ಕಳೆದುಕೊಳ್ಳುವುದನ್ನ ತಪ್ಪಿಸಿದರೆ ಇಂತಹ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು’ ಎಂದು ಕಾಮೆಂಟ್ ಮಾಡಿದ್ದಾರೆ.

ಅವರು ಈ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ‘ಯುವಕರಿಗೆ ಕುಡಿತ, ಡ್ರಗ್ಸ್ ಸೇವನೆ ಮಾಡಬೇಡಿ ಎಂದು ಹೇಳುವುದು ನನ್ನ ಉದ್ದೇಶ. ಸಮಾಜದ ಹೊರಗಿರುವ ಕೆಟ್ಟವರಿಂದ ದೂರವಿರಲು ಎಚ್ಚರದಿಂದಿರಿ ಎಂದು ಸಲಹೆ ನೀಡಿದ್ದೆ ಎಂದು ಸಮರ್ಥಿಸಿಕೊಳ್ಳಲು ಗಿಯಾಂಬ್ರುನೋ ಪ್ರಯತ್ನಿಸಿದ್ದರು.

ಇತ್ತೀಚೆಗಷ್ಟೇ ತಮ್ಮ ಮಹಿಳಾ ಉದ್ಯೋಗಿಗಳ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ನಿಂದಿಸಿರುವ ಆಡಿಯೋಗಳು ವೈರಲ್ ಆಗಿದ್ದವು.

Advertisement. Scroll to continue reading.

ಜಾರ್ಜಿಯಾ ಮೆಲೋನಿ ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ. ಕಳೆದ ವರ್ಷ ಬ್ರದರ್ಸ್ ಆಫ್ ಇಟಲಿ ಪಕ್ಷದ ಪರವಾಗಿ ಜವಾಬ್ದಾರಿ ವಹಿಸಿಕೊಂಡು ಇತಿಹಾಸ ನಿರ್ಮಿಸಿದ್ದರು. ಈ ಜೋಡಿಗೆ 7 ವರ್ಷದ ಒಬ್ಬ ಮಗಳಿದ್ದಾಳೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!