Connect with us

Hi, what are you looking for?

Diksoochi News

ಸಿನಿಮಾ

ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ್, ರಾಕ್‌ಲೈನ್ ವೆಂಕಟೇಶ್ ನಿವಾಸಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ

1

ಚಂದನವನ : ಕನ್ನಡ ಚಿತ್ರರಂಗದ ನಟರಿಗೆ ಈಗ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಲ ನಟರ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಅವರ ನಿವಾಸದ ಮೇಲೆ ರೇಡ್ ಕೂಡ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ನಟ ಜಗ್ಗೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಅವರು ಹುಲಿ ಉಗುರು ಧರಿಸಿದ ಸಂಬಂಧ ಅರಣ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಹುಲಿ ಉಗುರು ಧರಿಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿ ಮಾಹಿತಿಯನ್ನು ವಿಚಾರಣಾಧಿಕಾರಿಗಳ ಮುಂದೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಇನ್ನೂ ಇದಷ್ಟೇ ಅಲ್ಲದೇ ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ನಿವಾಸ, ಆರ್ ಆರ್ ನಗರದಲ್ಲಿರುವಂತ ನಟ ದರ್ಶನ್ ಮನೆ ಹಾಗೂ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇರುವಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸಿದ್ದಾರೆ.

Advertisement. Scroll to continue reading.

ಹುಲಿ ಉಗುರು ಧರಿಸಿದ್ದಂತ ನಟ ಜಗ್ಗೇಶ್, ದರ್ಶನ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅದು ಅಸಲಿಯೋ ಅಥವಾ ನಕಲಿಯೋ ಅನ್ನೋ ಬಗ್ಗೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!