Connect with us

Hi, what are you looking for?

Diksoochi News

ರಾಷ್ಟ್ರೀಯ

ಮುಕೇಶ್ ಅಂಬಾನಿಗೆ ಜೀವ ಬೆದರಿಕೆ; ಆರೋಪಿ ಬಂಧನ

1

ಮುಂಬೈ : ಉದ್ಯಮಿ ಮುಖೇಶ್ ಅಂಬಾನಿಗೆ ಹಲವು ಬೆದರಿಕೆ ಇಮೇಲ್‌ಗಳನ್ನು ಬರುತ್ತಿದ್ದವು. ಹಣಕ್ಕಾಗಿ ಬೇಡಿಕೆಯನ್ನೂ ಇಡಲಾಗುತ್ತಿತ್ತು. ಇದೀಗ ಈ ಆರೋಪದ ಮೇಲೆ ತೆಲಂಗಾಣ ಮೂಲದ 19 ವರ್ಷದ ಯುವಕನನ್ನು ಮುಂಬೈನಲ್ಲಿ ಗಾಮ್‌ದೇವಿ ಪೊಲೀಸರು ಶನಿವಾರ ಮುಂಜಾನೆ ಬಂಧಿಸಿದ್ದಾರೆ.

ಆರೋಪಿಯನ್ನು ಗಣೇಶ್ ರಮೇಶ್ ವನಪರ್ಧಿ ಎಂದು ಗುರುತಿಸಲಾಗಿದೆ. ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಇ-ಮೇಲ್ ಐಡಿ ಶಾದಾಬ್ ಖಾನ್ ಎಂಬ ವ್ಯಕ್ತಿಗೆ ಸೇರಿದ್ದು, ಬೆಲ್ಜಿಯಂನಿಂದ ಇ-ಮೇಲ್ ಸಂದೇಶಗಳು ಬಂದಿವೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

Advertisement. Scroll to continue reading.

ಇದು ಆತನ ಸರಿಯಾದ ಐಡಿಯೇ ಅಥವಾ ನಕಲಿ ಐಡಿ ಬಳಸಿ ಇ-ಮೇಲ್‍ಗಳನ್ನು ಕಳುಹಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಲೆ ಬೆದರಿಕೆ :

ಆರೋಪಿಯಿಂದ ಮೊದಲು 20 ಕೋಟಿ ರೂ. ನೀಡುವಂತೆ ಇ-ಮೇಲ್ ಬಂದಿತ್ತು. ಈ ವೇಳೆ ದೂರು ನೀಡಲಾಗಿತ್ತು. ಇದಾದ ಕೆಲವು ದಿನಗಳ ನಂತರ 200 ಹಾಗೂ 400 ಕೋಟಿ ರೂ. ಬೇಡಿಕೆಯ ಇ-ಮೇಲ್‍ಗಳು ಬಂದಿದ್ದವು. ಅಲ್ಲದೇ ಹಣ ನೀಡದೇ ಇದ್ದರೆ ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಮುಕೇಶ್ ಅಂಬಾನಿ ಅವರಿಗೆ ಈ ಹಿಂದೆಯೂ ಕೊಲೆ ಬೆದರಿಕೆ ಬಂದಿತ್ತು. ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಬೆದರಿಕೆ ಕರೆ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಕಳೆದ ವರ್ಷ ಬಿಹಾರದ ವ್ಯಕ್ತಿಯನ್ನು ಬಂಧಿಸಿದ್ದರು

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!