Connect with us

Hi, what are you looking for?

Diksoochi News

ರಾಜ್ಯ

ತಪ್ಪಿದ ದುರಂತ: ರೈಲು ಹಳಿತಪ್ಪಿಸಲು ಯತ್ನಿಸಿದ ಮೂವರ ಬಂಧನ

0

ಮೈಸೂರು: ಮೈಸೂರಿನ ನಂಜನಗೂಡು ಮತ್ತು ಕಡಕೋಳ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಹಳಿತಪ್ಪಿಸಲು ವಿಫಲ ಯತ್ನ ನಡೆದಿದೆ. ಲೋಕೋಪೈಲಟ್ ಗಳು ತಡೆದಿದ್ದು, ಈ ಮೂಲಕ ದೊಡ್ಡ ದುರಂತವೊಂದು ತಪ್ಪಿದೆ.

ಈ ಸಂಬಂಧ ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೇ ಪೊಲೀಸರು (ಜಿಆರ್‌ಪಿ) ಒಡಿಶಾ ಮೂಲದ ಸೋಮಯ್ ಮರಾಂಡಿ, ಭಜಾನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬವರನ್ನು ಬಂಧಿಸಲಾಗಿದೆ.

ಹಳಿ ತಪ್ಪಿಸಲು ಯತ್ನಗಳು ನಡೆಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮೈಸೂರಿನ ಆರ್‌ಪಿಎಫ್‌ನ ಪೋಸ್ಟ್‌ ಕಮಾಂಡರ್‌ ಎಂಎನ್‌ಎ ಖಾನ್‌ ಮತ್ತು ಕೆವಿ ವೆಂಕಟೇಶ ಅವರು ಆರ್‌ಪಿಎಫ್‌ ಸಿಬ್ಬಂದಿ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿಅನುಮಾನಾಸ್ಪದ ರೀತಿಯಲ್ಲಿ ಓಡಾಡಿಕೊಂಡಿದ್ದ ಒಡಿಶಾ ಮೂಲದ ಸೋಮಯ್ ಮರಾಂಡಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.

Advertisement. Scroll to continue reading.

ವಿಚಾರಣೆ ವೇಳೆ ಆತ ಇನ್ನಿಬ್ಬರು ಸೇರಿ ರೈಲನ್ನು ಹಳಿತಪ್ಪಿಸಲು ನಡೆಸಲಾಗಿದ್ದ ಪ್ರಯತ್ನದ ಕುರಿತು ಬಾಯ್ಬಿಟ್ಟಿದ್ದಾನೆ.

ನಂಜನಗೂಡು ಮತ್ತು ಕಡಕೋಳದ ನಡುವಿನ ರೈಲ್ವೆ ಹಳಿಯ ಮೇಲೆ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಯತ್ನಿಸಿದ್ದರು. ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟಿದ್ದ ಅಕ್ಕಪಕ್ಕದಲ್ಲೇ ಈ ಆರೋಪಿಗಳು ಓಡಾಡುತ್ತಿದ್ದರು. ಇದರ ಪರಿಣಾಮ ರೈಲು ಸಂಚಾರದಲ್ಲಿ ಸುಮಾರು ಆರು ನಿಮಿಷಗಳ ಕಾಲ ವಿಳಂಬವಾಗಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

error: Content is protected !!