Connect with us

Hi, what are you looking for?

Diksoochi News

ಕರಾವಳಿ

ಉಡುಪಿ ಕೊಲೆ ಪ್ರಕರಣ; ಆರೋಪಿ ಸ್ಥಳ ಮಹಜರು ವೇಳೆ ಸ್ಥಳೀಯರ ಆಕ್ರೋಶ; ಲಾಠಿ ಚಾರ್ಜ್

1

ಉಡುಪಿ : ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ತೃಪ್ತಿ ನಗರದಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.

ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಸ್ಥಳ ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದರು. ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಆರೋಪಿಯನ್ನು ನಮಗೊಪ್ಪಿಸಿ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ.

ಘಟನೆ ಬೆನ್ನಲ್ಲೇ ಆ ಭಾಗದಲ್ಲಿ ರಸ್ತೆ ತಡೆ ಮಾಡಲಾಯಿತು. ಸ್ಥಳಕ್ಕೆ ಎಸ್ ಪಿ, ಡಿ ಸಿ ಬರಬೇಕು ಎಂದು ಆಗ್ರಹಿಸಿ ರಸ್ತೆ ತಡೆ ಮಾಡಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ಧಿಕ್ಕಾರವನ್ನೂ ಕೂಗಲಾಯಿತು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನೂ ಕೂಡಲೇ ನಿಯೋಜಿಸಲಾಯಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!