Connect with us

Hi, what are you looking for?

Diksoochi News

ರಾಷ್ಟ್ರೀಯ

ಕೇರಳ ಸ್ಫೋಟ: ಯುವಕ ಸಾವು; ಮೃತರ ಸಂಖ್ಯೆ 6ಕ್ಕೆ ಏರಿಕೆ

1

ತಿರುವನಂತಪುರಂ : ಕೇರಳದ ಕಲಮಸ್ಸೆರಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಟ್ಟಗಾಯಗಳಿಂದ ಬಳಲುತ್ತಿದ್ದ ಯುವಕನೊಬ್ಬ ಗುರುವಾರ ರಾತ್ರಿ ಸಾವಿಗೀಡಾಗಿದ್ದು, ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. 

ಪ್ರವೀಣ್ ಪ್ರದೀಪನ್(24) ಮೃತ ಯುವಕ.

ಆತ ಶೇ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ವೆಂಟಿಲೇಟರ್ ಬೆಂಬಲದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ರಾತ್ರಿ 10.40ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಪ್ರವೀಣ್ ಸ್ಫೋಟದಲ್ಲಿ ಮೃತಪಟ್ಟ 12 ವರ್ಷದ ಲಿಬ್ನಾ ಅವರ ಹಿರಿಯ ಸಹೋದರ. ಅವರ ತಾಯಿ ಸಾಲಿ ಪ್ರದೀಪನ್ ಕೂಡ ಶನಿವಾರ ಮೃತಪಟ್ಟಿದ್ದಾರೆ.

Advertisement. Scroll to continue reading.

ಸ್ಫೋಟದಲ್ಲಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರ ಸಹೋದರ ರಾಹುಲ್ ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದಲ್ಲಿ ಈಗಾಗಲೇ ಪೆರುಂಬವೂರ್‌ನ ಇರಿಂಗೋಲ್‌ನ ಲಿಯೋನಾ ಪೌಲೋಸ್ (55), ತೊಡುಪುಳದ ಕಲಿಯಾರ್‌ನ ಕುಮಾರಿ (52), ಕಲಮಸ್ಸೇರಿಯ ಮೋಲಿ ಜಾಯ್ (61) ಸಾವಿಗೀಡಾಗಿದ್ದಾರೆ. ಪ್ರಕರಣ ಸಂಬಂಧ ಒಟ್ಟು 11 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಆರು ಮಂದಿಯನ್ನು ಐಸಿಯುಗೆ ದಾಖಲಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!