Connect with us

Hi, what are you looking for?

Diksoochi News

ಸಿನಿಮಾ

ಭಾರತ ವಿಶ್ವಕಪ್ ಗೆದ್ದರೆ ಬೀಚ್‌ನಲ್ಲಿ ಬೆತ್ತಲಾಗಿ ಓಡಾಡುತ್ತೇನೆ ಎಂದ ನಟಿ

1

ಅಮರಾವತಿ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಭಾರತ ತಂಡ ಮೊದಲ ಸೆಮಿಫಿನಾಲೆಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಫೈನಲ್‌ಗೆ ಅಡಿ ಇಟ್ಟಿದೆ. ಭಾನುವಾರ(ನ.19) ರಂದು ನಡೆಯಲಿರುವ ಫೈನಲ್‌ಗೆ ರೋಹಿತ್ ಶರ್ಮಾ ಪಡೆಗೆ ‘ಗೆದ್ದು ಬರುವಂತೆ’ ಎಲ್ಲರೂ ಹಾರೈಸುತ್ತಿದ್ದಾರೆ.

ಇದೀಗ ತೆಲುಗಿನ ಖ್ಯಾತ ನಟಿಯೊಬ್ಬರು ಭಾರತ ವಿಶ್ವಕಪ್ ಗೆದ್ದರೆ ತಾವು ಬೆತ್ತಲಾಗಿ ವಿಶಾಖಪಟ್ಟಣದ ಬೀಚ್‌ನಲ್ಲಿ ಓಡಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ‌. ಸದ್ಯ ಇದು ಚರ್ಚೆಗೆ ಗ್ರಾಸವಾಗಿದೆ.

ತೆಲುಗು ನಟಿ ರೇಖಾ ಬೋಜ್, ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್ ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Advertisement. Scroll to continue reading.

ನಟಿಯ ಪೋಸ್ಟ್ ಗೆ ಹಲವಾರು ಪ್ರತಿಕ್ರಿಯೆಗಳು ಬಂದಿವೆ. ಹಲವರು ಪೋಸ್ಟ್ ಅನ್ನು ಖಂಡಿಸಿದ್ದಾರೆ. ಇನ್ನು ಕೆಲವರು ಪಬ್ಲಿಸಿಟಿಗಾಗಿ ಹೀಗೆಲ್ಲ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.

ಮಾಂಗಲ್ಯಂ’, ‘ಸ್ವಾತಿ ಚಿನುಕು’, ‘ರಂಗೀಲಾ’, ‘ಕಾಲಾಯ ತಸ್ಮಾಯ ನಾಮಃ’ ಸೇರಿದಂತೆ ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸಿರುವ ರೇಖಾ ಬೋಜ್ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ.

ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆ ಎಂದು ನಟಿಯರು ಹೇಳುವುದು ಇದು ಹೊಸತೇನೂ ಅಲ್ಲ. ಗ್ಲಾಮರಸ್ ಪಾತ್ರಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೊಂದು ಹೇಳಿಕೆ ನೀಡಿದ್ದರು. ಭಾರತ 2011ರ ವಿಶ್ವಕಪ್ ಆಡುವ ಸಮಯದಲ್ಲಿ, ‘ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ’ ಎಂದು ಹೇಳಿಕೆ ನೀಡಿದ್ದರು. ಆಗ ಪೂನಂರ ಈ ಹೇಳಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ರಾಷ್ಟ್ರೀಯ

0 ತಿರುವನಂತಪುರಂ: 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಮಹಿಳೆಯೊಬ್ಬಳು ಅವಕಾಶ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಕೋರ್ಟ್ 40 ವರ್ಷ, 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000...

error: Content is protected !!