Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0


ಉಡುಪಿ : ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.


ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಂದಿರುವ ಹಿನ್ನೆಲೆ, ಅಂತರ್ಜಲ ಮಟ್ಟವು ಶೇ. 24 ರಷ್ಟು ಕುಸಿದಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇವೆ. ಅಧಿಕಾರಿಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಕೈಗೊಳ್ಳುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ, ನೀರಿನ ಮಿತ ಬಳಕೆ ಮಾಡುವುದರೊಂದಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.
ಈಗಿನಿಂದಲೇ ಸ್ಥಳೀಯವಾಗಿ ನೀರಿನ ಲಭ್ಯತೆ, ಖಾಸಗಿ ಬೋರ್‌ವೆಲ್‌ಗಳಿಂದ ನೀರನ್ನು ಪಡೆದು, ವಿತರಿಸುವ ಬಗ್ಗೆ ನೀಲನಕ್ಷೆಯನ್ನು ತಯಾರಿಸಬೇಕು. ತೀರ ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್‌ಗಳ ಮೂಲಕ ನೀರನ್ನು ಸಾರ್ವಜನಿಕರಿಗೆ ನೀಡಬೇಕು. ಈ ಸಂಬಂಧ ಈಗಿನಿಂದಲೇ ಏಜೆನ್ಸಿಗಳನ್ನು ವಿವಿಧ ಷರತ್ತುಗಳನ್ನು ವಿಧಿಸುವುದರೊಂದಿಗೆ ಗುರುತಿಸಿ, ತಯಾರಿ ನಡೆಸಬೇಕು ಎಂದರು.

Advertisement. Scroll to continue reading.

ಸಾರ್ವಜನಿಕರಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ಹೊಸದಾಗಿ ಮನೆ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪರವಾನಿಗೆ ನೀಡುವಾಗ ಮಳೆ ನೀರಿನ ಕೊಯ್ಲನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.


ಜಿಲ್ಲೆಯಲ್ಲಿ ಈಗಾಗಲೇ ಕಾರ್ಕಳ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಇಲ್ಲಿನ ಬರ ಪರಿಸ್ಥಿತಿಗಳ ನಿರ್ವಹಣೆಗೆ ಸ್ಥಳೀಯ ಶಾಸಕರುಗಳನ್ನೊಳಗೊಂಡಂತೆ ತಹಶೀಲ್ದಾರರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಪ್ರತೀ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಬರ ನಿರ್ವಹಣೆ ಕುರಿತು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದರು.
ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು.

ಜಾನುವಾರುಗಳ ಮೇವಿಗೆ ಕೊರತೆ ಉಂಟಾಗದಂತೆ ಸಹ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ರೈತರಿಗೆ ಮೇವಿನ ಕಿಟ್ಟನ್ನು ವಿತರಿಸಬೇಕು. ಗೋಶಾಲೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಅರಣ್ಯ ಇಲಾಖೆಯ ಜಮೀನುಗಳಲ್ಲಿ ಮೇವನ್ನು ಬೆಳೆಯಲು ಮುಂದಾಗಬೇಕು. ಜಿಲ್ಲೆಯಲ್ಲಿ ಉತ್ಪತ್ತಿಯಾಗಿರುವ ಮೇವನ್ನು ಹೊರ ಜಿಲ್ಲೆಗೆ ಹೋಗದಂತೆ ಚೆಕ್ ಪೋಸ್ಟ್‌ಗಳಲ್ಲಿ ತಡೆಹಿಡಿಯಬೇಕು ಎಂದು ಸೂಚಿಸಿದರು.


ಜಿಲ್ಲೆಯ ಪ್ರತಿಯೊಂದು ಕಿಂಡಿ ಆಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಅಳವಡಿಸಬೇಕು ಜಿಲ್ಲೆಯಲ್ಲಿ ಒಟ್ಟು 603 ಕಿಂಡಿ ಆಣೆಕಟ್ಟುಗಳಲ್ಲಿ 210 ಕ್ಕೆ ಮಾತ್ರ ಹಲಗೆಗಳನ್ನು ಅಳವಡಿಸಲಾಗಿದೆ. ಈಗಾಗಲೇ ಹಿಂದಿನ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಡೆ ಹಲಗೆಗಳನ್ನು ಅಳವಡಿಸಲು ಸೂಚನೆ ನೀಡಿದ್ದರೂ ಅಳವಡಿಸದೇ ಇರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿಯೇ ಅಳವಡಿಸುವಂತೆ ಸೂಚನೆ ನೀಡಿದರು.

Advertisement. Scroll to continue reading.


ಸಕಾಲ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಬೇಕು ಎಂದ ಅವರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಕೈಗೊಂಡ ಎಲ್ಲಾ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಕಡ್ಡಾಯವಾಗಿ ಪಾಲನೆ ಮಾಡಬೇಕು. ತಪ್ಪಿದ್ದಲ್ಲಿ ರಾಷ್ಟಿçÃಯ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಪ್ರದೇಶಗಳ ಪಟ್ಟಿ ತಯಾರಿಸಿ, ಮುಂದಿನ ದಿನಗಳಲ್ಲಿ ಆ ಸ್ಥಳಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಕ್ರಮ ವಹಿಸಬೇಕು ಎಂದರು.
ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ತಾತ್ಕಾಲಿಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು.


ಸಭೆಯಲ್ಲಿ ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಅಂತಾರಾಷ್ಟ್ರೀಯ

1 ಬೆಂಗಳೂರು : ಕೊರೋನಾ ಎಂಬ ಮಹಾಮಾರಿ ಬಂದ ಮೇಲೆ ಆತಂಕ ಸಹಜವಾಗಿದೆ. ಹೊಸ ಹೊಸ ವೈರಸ್, ಸೋಂಕುಗಳ ಹೆಸರು ಕೇಳಿದರೇನೆ ಜನರು ಭಯಗೊಳ್ಳುತ್ತಾರೆ. ಅದರಲ್ಲೂ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿವೆ....

error: Content is protected !!