ಪಡುಬಿದ್ರಿ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಭಾನುವಾರ ಕಾಪು ತಾಲೂಕು ಬಡಾ ಗ್ರಾಮ ಉಚ್ಚಿಲದಲ್ಲಿ ನಡೆದಿದೆ.
ಜನಾರ್ಧನ(63) ಮೃತ ವ್ಯಕ್ತಿ.
ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿ-66 ನ್ನು ದಾಟಿ ಉಡುಪಿ – ಮಂಗಳೂರು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿರುವ ವೇಳೆ ಮಾರುತಿ ಓಮ್ನಿ ಕಾರಿನ ಚಾಲಕ ಅತೀವೇಗ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಜನಾರ್ಧನ ರವರಿಗೆ ಡಿಕ್ಕಿ ಹೊಡೆದಿದ್ದಾನೆ.
Advertisement. Scroll to continue reading.![](http://diksoochinews.com/wp-content/uploads/2023/10/diksoochi_inline.jpeg)
![](http://diksoochinews.com/wp-content/uploads/2023/10/diksoochi_inline.jpeg)
ಪರಿಣಾಮ ಅವರು ರಸ್ತೆಗೆ ಬಿದ್ದು, ಅವರ ತಲೆಗೆ ಮತ್ತು ಕೈ, ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ನಂತರ ಅವರನ್ನು ಅಂಬ್ಯುಲೆನ್ಸ್ ಮೂಲಕ ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ಅಲ್ಲಿನ ವೈದ್ಯಾಧಿಕಾರಿ ಪರೀಕ್ಷಿಸಿ ಜನಾರ್ಧನ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.![](http://diksoochinews.com/wp-content/uploads/2023/10/diksoochi_inline.jpeg)
![](http://diksoochinews.com/wp-content/uploads/2023/10/diksoochi_inline.jpeg)