Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು ಆರೋಪ; ಅಹೋರಾತ್ರಿ ಪ್ರತಿಭಟನೆ

1

ಕುಂದಾಪುರ : ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮಗು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.


ನವೆಂಬರ್ 17 ರಂದು ರಾತ್ರಿ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಿಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.


ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಮನೆಯವರು ಹಾಗೂ ಊರಿನವರು ಆರೋಪಿಸಿದ್ದಾರೆ.
ಮೂರು ದಿನದ ಹಿಂದೆ ತೀವ್ರ ರಕ್ತಸ್ರಾವ ಹಾಗೂ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರೂ ಸರಿಯಾದ ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮ ವಹಿಸದೆ, ಸ್ವಾಭಾವಿಕ ಹೆರಿಗೆಯ ನೆಪವೊಡ್ಡಿ ಮೂರು ದಿನ ಕಾಯಿಸಿದ್ದಾರೆ. ಈ ಬಗ್ಗೆ ದೂರು ಕೊಟ್ಟರೆ ನಿಮಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ವೈದ್ಯಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಯುತ್ತಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

ರಾಷ್ಟ್ರೀಯ

0 ತಿರುವನಂತಪುರಂ: 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಮಹಿಳೆಯೊಬ್ಬಳು ಅವಕಾಶ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಕೋರ್ಟ್ 40 ವರ್ಷ, 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000...

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

error: Content is protected !!