Connect with us

Hi, what are you looking for?

Diksoochi News

ರಾಷ್ಟ್ರೀಯ

WATCH : ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ವಿಡಿಯೋ ಬಿಡುಗಡೆ!

2

ಉತ್ತರಕಾಶಿ: ಉತ್ತರಕಾಶಿಯಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.

ಸೋಮವಾರ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ. ಇದಕ್ಕೂ ಮುನ್ನ ಸುರಂಗದ ಮೇಲ್ಭಾಗದಲ್ಲಿದ್ದ 4 ಇಂಚಿನ ಟ್ಯೂಬ್ ಮೂಲಕ ಆಮ್ಲಜನಕ ಹಾಗೂ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿತ್ತು. 

ನಾವು 53 ಮೀಟರ್ ಪೈಪ್‌ನ್ನು ಅವಶೇಷಗಳ ಇನ್ನೊಂದು ಬದಿಗೆ ಕಳುಹಿಸಿದ್ದೇವೆ ಮತ್ತು ಸಿಲುಕಿರುವ ಕಾರ್ಮಿಕರು ನಮ್ಮ ಧ್ವನಿ ಕೇಳುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯಚಸ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಖಲ್ಖೋ ತಿಳಿಸಿದ್ದಾರೆ. 

Advertisement. Scroll to continue reading.

ಉತ್ತರ ಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರ್ ಮತ್ತು ದಾಂಡಲ್ ಗಾಂವ್ ನಡುವೆ ನಿರ್ಮಿಸಲಾಗುತ್ತಿರುವ ನಾಲ್ಕೂವರೆ ಕಿ.ಮೀ ಉದ್ದದ ಸುರಂಗದ 150 ಮೀಟರ್ ನಷ್ಟು ಭಾಗ ನವೆಂಬರ್ 12 ರಂದು ಕುಸಿದಿತ್ತು. ಅದರ ಒಳಗಡೆ 41 ಕಾರ್ಮಿಕರು ಸಿಲುಕಿದ್ದು, ಕಳೆದ ಎಂಟು ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ರಾಷ್ಟ್ರೀಯ

0 ನವದೆಹಲಿ : ಎರಡು ವರ್ಷಗಳಿಂದ ನಿಷ್ಕ್ರಿಯವಾಗಿರುವ ವೈಯಕ್ತಿಕ ಖಾತೆಗಳನ್ನು ಗೂಗಲ್ ಈ ವಾರದಿಂದ ಡಿಲೀಟ್‌ ಮಾಡುತ್ತಿದೆ. ಟೆಕ್ ದೈತ್ಯ ಈ ವರ್ಷದ ಮೇ ತಿಂಗಳಲ್ಲಿ ನೀತಿಯನ್ನು ಘೋಷಣೆ ಮಾಡಿತ್ತು. ಕಂಪನಿಯು Google Workspace...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

error: Content is protected !!