Connect with us

Hi, what are you looking for?

Diksoochi News

ಅರೆ ಹೌದಾ!

ವಿಶ್ವ ವಿಜೇತ ಆಸ್ಟ್ರೇಲಿಯಾ ತಂಡದಲ್ಲಿ ಕುಡ್ಲದ ಕುವರಿ

1

ಮಂಗಳೂರು : ನವೆಂಬರ್ 19ರಂದು ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಗೆದ್ದು ಬೀಗಿದೆ. ಆಸೀಸ್ ತಂಡದ ಗೆಲುವಿನೊಂದಿಗೆ ಇದೀಗ ನಾರಿಶಕ್ತಿಯೊಬ್ಬರ ಹೆಸರು ಮುನ್ನೆಲೆಗೆ ಬಂದಿದೆ. ಈಕೆ ತಂಡವನ್ನು ಹುರಿದುಂಬಿಸಿರುವ ಬಗ್ಗೆ ಗಮನ ಸೆಳೆದಿದ್ದಾರೆ.

ವಿಶೇಷ ಅಂದ್ರೆ ಈ ಹೆಸರು ಭಾರತದ್ದು, ಅದರಲ್ಲೂ ಕರ್ನಾಟಕದ ಮಂಗಳೂರಿನದ್ದು ಎಂದರೆ ನೀವು ನಂಬಲೇಬೇಕು. ಆ ಹೆಸರೇ ಉರ್ಮಿಳಾ ರೊಸಾರಿಯೋ.

ಕಿನ್ನಿಗೋಳಿಯ ಯುವತಿ :

Advertisement. Scroll to continue reading.

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿ 34 ವರ್ಷದ ಮಂಗಳೂರು ಮೂಲದ ಉರ್ಮಿಳಾ ರೊಸಾರಿಯೋ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಃ ಮಂಗಳೂರಿನ ಕಿನ್ನಿಗೋಳಿಯವರು. ಐವಿ ಮತ್ತು ವಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿಯಾಗಿರುವ ಊರ್ಮಿಳಾ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರ ಕೇರ್ ಟೇಕರ್ ಆಗಿದ್ದಾರೆ.

ಉರ್ಮಿಳಾ ರೊಸಾರಿಯೋ ಹೆತ್ತವರು ಮೂಲತಃ ಕಿನ್ನಿಗೋಳಿಯವರಾಗಿದ್ದರೂ, ಉದ್ಯೋಗದ ನಿಮಿತ್ತ ಕತಾರ್‌ನ ದೋಹಾದಲ್ಲಿ ವಾಸ್ತವ್ಯವಾಗಿದ್ದರು. ಉರ್ಮಿಳಾ ಕತಾರ್‌ನಲ್ಲಿಯೇ ಜನಿಸಿದರು. ಬಾಲ್ಯದಿಂದಲೇ ಕ್ರೀಡೆ ಬಗ್ಗೆ ಆಸಕ್ತಿ ಹೊಂದಿದ್ದ ಉರ್ಮಿಳಾ, ಮೊದಲು ಕತಾರ್ ಟೆನ್ನಿಸ್ ಫೆಡರೇಶನ್‌ನಲ್ಲಿ ಕಾರ್ಯನಿರ್ವಹಿಸಿದ್ದರು.

ಬಳಿಕ ಆಸ್ಟ್ರೇಲಿಯಾದಲ್ಲಿ ಅಡಿಟೇಲ್ ಕ್ರಿಕೆಟ್ ತಂಡದಲ್ಲಿ ಮೂರು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು. ಆನಂತರ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಟೀಮ್ ಮ್ಯಾನೇಜರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಕತಾರ್‌ನಲ್ಲಿ ನಡೆದ ವಿಶ್ವ ಫುಟ್ಬಾಲ್ ವೇಳೆ ನಾಲ್ಕು ತಿಂಗಳ ಕಾಲ ಸೇವೆ ಸಲ್ಲಿಸಿದ್ದರು. ಅಪಾರ ಅನುಭವದೊಂದಿಗೆ ಮತ್ತೆ ಆಸ್ಟ್ರೇಲಿಯಾಕ್ಕೆ ಮರಳಿದ ಉರ್ಮಿಳಾ ರೊಸಾರಿಯೋ, ಸದ್ಯ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೇರ್ ಟೇಕರ್ ಆಗಿದ್ದಾರೆ. ವಿಶ್ವಕಪ್ ನಿರ್ವಹಣೆಗಾಗಿ ಪುರುಷರ ತಂಡದೊಂದಿಗಿದ್ದ ಉರ್ಮಿಳಾ, ಶೀಘ್ರದಲ್ಲೇ ಅವರು ಮಹಿಳಾ ಕ್ರಿಕೆಟ್ ತಂಡವನ್ನು ಸೇರಲಿದ್ದು, ಅವರೊಂದಿಗೆ ಡಿಸೆಂಬರ್ ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ಸದ್ಯ ಉರ್ಮಿಳಾ ರೊಸಾರಿಯೋ ಅವರ ಹೆತ್ತವರು ಕಳೆದ ಏಳು ವರ್ಷದಿಂದ ಸಕಲೇಶಪುರದಲ್ಲಿ ನೆಲೆಸಿದ್ದು, ಅಲ್ಲಿಯೇ ಎಸ್ಟೇಟ್ ಖರೀದಿಸಿ ವಾಸ್ತವ್ಯ ಹೂಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

error: Content is protected !!