Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪ್ರತ್ಯೇಕ ಪ್ರಕರಣ; ಇಬ್ಬರು ಆತ್ಮಹತ್ಯೆ

0

ಹೆಬ್ರಿ/ಕೋಟ : ಅನಾರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಹೆಬ್ರಿಯ ಚಾರ ಗ್ರಾಮದಲ್ಲಿ ನಡೆದಿದೆ.

ಕೃಷ್ಣ ( 51 ) ಮೃತಪಟ್ಟವರು.

ಕೃಷ್ಣ ಅವರು ವಿಪರೀತ ಮೈಕೈ ನೋವಿನಿಂದ ಸರಿಯಾಗಿ ಕೆಲಸಕ್ಕೆ ಹೋಗಲು ಆಗದೇ ಇರುವ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಕ್ಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ  (53)  ನೇಣಿಗೆ ಶರಣಾದವರು. ಇವರು ತೆಕ್ಕಟ್ಟೆ ಗ್ರಾಮದ ಕೊಮೆ ಬೀಚ್‌ ಬಳಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    Advertisement

    Trending

    You May Also Like

    error: Content is protected !!