ಕೌಶಾಂಬಿ : ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಸಂತ್ರಸ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಪೆÇಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಸದ್ಯ ಎನ್ಕೌಂಟರ್ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1 ನಿಮಿಷ 18 ಸೆಕೆಂಡ್ ನ ಈ ವೀಡಿಯೋದಲ್ಲಿ ಗದ್ದೆಯೊಳಗೆ ಅಡಗಿದ್ದ ಆರೋಪಿಯನ್ನು ಪೆÇಲೀಸರು ಸುತ್ತುವರಿದಿರುವುದು ಕಂಡುಬರುತ್ತದೆ. ಈ ವೇಳೆ ಗುಂಡುಗಳ ಸದ್ದು ಕೂಡ ಕೇಳಿಸುತ್ತದೆ.

ಎನ್ಕೌಂಟರ್ ವೇಳೆ ಪೆÇಲೀಸರು ಹಾರಿಸಿದ ಗುಂಡುಗಳು ಆರೋಪಿಯ ಎರಡೂ ಕಾಲುಗಳಿಗೆ ತಗುಲಿವೆ. ಪೆÇಲೀಸರು ಆರೋಪಿಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಯ ಬಗ್ಗೆ ಪೆÇಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಅವರು ಆಸ್ಪತ್ರೆಗೆ ಆಗಮಿಸಿ ಪೆÇಲೀಸರಿಂದ ಎನ್ಕೌಂಟರ್ ಬಗ್ಗೆ ಮಾಹಿತಿ ಪಡೆದರು.
ಒಂದೂವರೆ ವರ್ಷಗಳ ಹಿಂದೆ ಕೌಶಂಬಿ ಜಿಲ್ಲೆಯ ಮಾಹೆವಾಘಾಟ್ ಪೆÇಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದ ಬಾಲಕಿಯ ಮೇಲೆ ಅದೇ ಗ್ರಾಮದ ಪವನ್ ನಿಶಾದ್ ಎಂಬಾತ ಅತ್ಯಾಚಾರ ಎಸಗಿದ್ದ. ಈ ವೇಳೆ ಬಾಲಕಿ ಹಾಗೂ ಆಕೆಯ ಕುಟುಂಬಸ್ಥರಿಂದ ಪವನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಆರೋಪಿ ಪವನ್ನನ್ನು ಜೈಲಿಗೆ ಕಳುಹಿಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಪವನ್ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದ. ನವೆಂಬರ್ 20ರಂದು ಸಂತ್ರಸ್ತೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಪ್ರಕರಣದಲ್ಲಿ ಪವನ್ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಎನ್ಕೌಂಟರ್ನಲ್ಲಿ ಪವನ್ನ ಇಬ್ಬರು ಸಹಚರರನ್ನು ಪೆÇಲೀಸರು ಈಗಾಗಲೇ ಬಂಧಿಸಿದ್ದರು.
ಆರೋಪಿಯು ಮಾಹೆವಾಘಾಟ್ನ ಕಚರಿ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಮೇರೆಗೆ ಮಾಹೆವಾಘಾಟ್ ಪೆÇಲೀಸ್ ಠಾಣೆಯ ಪೆÇಲೀಸ್ ಎಸ್ಒಜಿ ತಂಡಕ್ಕೆ ಲಭಿಸಿತ್ತು ಎಂದು ಪೆÇಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ತಿಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೆÇಲೀಸರು ಮಹೇವ ಘಾಟ್ ಕ್ಯಾಚಾರ್ ಪ್ರದೇಶವನ್ನು ಸುತ್ತುವರಿದಾಗ, ಆರೋಪಿಗಳು ಪೆÇಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ.
कौशांबी में Live Encounter pic.twitter.com/c4Dr5bbhm6— Pravin Kumar Yadav (@PravinNews) November 25, 2023
ಆ ನಂತರ ಪೆÇಲೀಸ್ ತಂಡವೂ ಗುಂಡಿನ ದಾಳಿ ನಡೆಸಿತು. ಈ ವೇಳೆ ಪವನ್ ಅವರ ಎರಡೂ ಕಾಲುಗಳಿಗೆ ಗುಂಡು ತಗುಲಿದೆ. ಬಳಿಕ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೆÇಲೀಸರು ಪವನ್ ಬಳಿಯಿದ್ದ ಅಕ್ರಮ ಪಿಸ್ತೂಲ್ ಮತ್ತು ಹಲವಾರು ಜೀವಂತ ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಂಡಿದ್ದಾರೆ.

