ಬೆಂಗಳೂರು : ಹೆತ್ತವರ ಮಡಿಲಿನಲ್ಲಿ ಇರಬೇಕಾಗಿದ್ದ ಹಸುಗೂಸುಗಳನ್ನು ಕದ್ದು ಮಾರಾಟ ಮಾಡುವ ಜಾಲವೊಂದನ್ನು ಸಿಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನವಜಾತ ಶಿಶು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ಕಣ್ಣನ್ ರಾಮಸ್ವಾಮಿ, ಹೇಮಲತಾ, ಮುರುಗೇಶ್ವರಿ ಹಾಗೂ ಶರಣ್ಯ ಬಂಧಿತರು.
ಆರ್.ಆರ್.ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಶುಕ್ರವಾರ ಮಗು ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಸಂಘಟಿತ ಅಪರಾಧ ವಿಭಾಗದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಮಹಿಳೆಯೊಬ್ಬರಿಗೆ ಮಗುವನ್ನು ಮಾರಾಟ ಮಾಡಲು ಯತ್ನಿಸುತ್ತಿರು ಎನ್ನಲಾಗಿದೆ.
ಮಹಿಳೆಯೊಬ್ಬರು ಬಂದ ನಂತರ ಮಗುವನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ರಾತ್ರಿ ರಾಜರಾಜೇಶ್ವರಿ ದೇವಸ್ಥಾನದ ಬಳಿ ಬಂಧಿಸಲಾಗಿದೆ. ಮಗುವನ್ನು ಖರೀದಿಸಲು ಬಯಸಿದ್ದ ಮಹಿಳೆಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಪೆÇಲೀಸರು ಇನ್ನೂ ಆಕೆಯನ್ನು ಬಂಧಿಸಿಲ್ಲ. ಬಂಧಿತ ನಾಲ್ವರಿಂದ ಆಕೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೆÇಲೀಸರು ಸಂಗ್ರಹಿಸುತ್ತಿದ್ದಾರೆ.
ದಂಧೆಯ ಬಗ್ಗೆ ಮಾಹಿತಿ ಪಡೆದ ಪೆÇಲೀಸ್ ಇನ್ಸ್ಪೆಕ್ಟರ್ ನಯಾಜ್ ಅಹ್ಮದ್ ನೇತೃತ್ವದ ತಂಡವು ತಮಿಳುನಾಡು ನೋಂದಣಿಯೊಂದಿಗೆ ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಅವರನ್ನು ಬಂಧಿಸಿದೆ. ನವಜಾತ ಶಿಶುಗಳನ್ನು ಮಾರಾಟ ಮಾಡಲು ಮಕ್ಕಳಿಲ್ಲದ ದಂಪತಿಗಳನ್ನು ಗುಂಪು ಟಾರ್ಗೆಟ್ ಮಾಡಲಾಗಿತ್ತು. ಮಹಾಲಕ್ಷ್ಮಿ ಮಗುವಿಗೆ ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು.
ಇನ್ನು, ಇವರಿಂದ ಮೂರು ಮೊಬೈಲ್ ಫೆÇೀನ್ ಹಾಗೂ ಒಂದು ಕಾರು, ಒಟ್ಟು 3.15 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಮಗುವನ್ನು ಕದ್ದಿದ್ದಾನಾ ಅಥವಾ ಬೇರೊಬ್ಬ ಮಹಿಳೆಯಿಂದ ಮಗುವನ್ನು ಖರೀದಿಸಿದ್ದಾನಾ ಅಥವಾ ಆರೋಪಿಗಳಲ್ಲಿ ಒಬ್ಬರು ಮಗುವಿನ ತಾಯಿಯೇ ಎಂಬುದು ನಮಗೆ ಖಚಿತವಾಗಿಲ್ಲ. ಆರೋಪಿಯು ದೊಡ್ಡ ದಂಧೆಯ ಭಾಗವಾಗಿರಬೇಕು. ಈ ಬಗ್ಗೆ ವಿಸ್ತೃತ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಸಿಸಿಬಿ ಪೆÇಲೀಸರು ಐವರು ಆರೋಪಿಗಳ ವಿರುದ್ಧ ರಾಜರಾಜೇಶ್ವರಿನಗರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015 ರ ಅಡಿಯಲ್ಲಿ ಇತರ ಐಪಿಸಿ ಸೆಕ್ಷನ್ನೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ.