Connect with us

Hi, what are you looking for?

Diksoochi News

Uncategorized

ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ ಚಲನಚಿತ್ರದ ಟ್ರೈಲರ್ ಬಿಡುಗಡೆ

0

ಕುಂದಾಪುರ: ಜಿ.ಸಿ ಮೂವಿಸ್ ಕುಂದಾಪುರ ಬ್ಯಾನರ್‍ನಡಿಯಲ್ಲಿ ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ ಚಲನಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಕುಂದಾಪುರದ ಕುಂದೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ, ಟ್ರೈಲರ್ ಬಿಡುಗಡೆಗೊಳಿಸಿ ಮಾತನಾಡಿದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಕುಂದಾಪುರ ಭಾಗದ ಪ್ರತಿಭೆಗಳು ಚಲನಚಿತ್ರ ನಿರ್ಮಿಸುವುದರಿಂದ ಈ ಪರಿಸರದ ವಿಶೇಷತೆಗಳನ್ನು ಬಳಸಿಕೊಳ್ಳಲು ಸಾಧ್ಯ. ಕುಂದಾಪುರ ಪರಿಸರದಲ್ಲಿ ಸಾಕಷ್ಟು ಪ್ರವಾಸೋಧ್ಯಮವಾಗಿ ಗಮನ ಸಳೆಯುವ ವಿಶಿಷ್ಠವಾದ ಸ್ಥಳಗಳಿವೆ. ಅವುಗಳನ್ನು ಚಲನಚಿತ್ರಗಳಲ್ಲಿ ತೋರಿಸಿದಾಗ ಆ ಸ್ಥಳಗಳು ಪ್ರಸಿದ್ಧವಾಗುತ್ತವೆ. ಹಾಗೆಯೇ ಈ ಭಾಗದ ಅಭಿನಯ ಆಸಕ್ತ ಪ್ರತಿಭೆಗಳಿಗೂ ಅವಕಾಶ ಸಿಗುತ್ತದೆ. ಓಂ ಗುರು, ಚಂದ್ರಶೇಖರ ಹಾಗೂ ಅವರ ತಂಡದ ಪ್ರಯತ್ನ ಯಶಸ್ಸು ಗಳಿಸಲಿ ಇನ್ನೂ ಹೆಚ್ಚು ಹೆಚ್ಚು ಚಿತ್ರಗಳು ಇವರಿಂದ ಮೂಡಿ ಬರಲಿ ಎಂದರು.


ಈಗಾಗಲೇ ಕುಂದಾಪುರ ಜಿಲ್ಲೆ ರಚನೆಯ ಬಗ್ಗೆ ಹೋರಾಟಗಳು ಆರಂಭವಾಗಿವೆ. ಉಪ ವಿಭಾಗಾಧಿಕಾರಿಗಳ ಕಚೇರಿ ಇದ್ದ ಕುಂದಾಪುರವೇ ಜಿಲ್ಲಾ ಕೇಂದ್ರವಾಗಬೇಕಾಗಿತ್ತು. ಆದರೆ ಆಗ ಉಡುಪಿ ಜಿಲ್ಲಾ ಕೇಂದ್ರವಾಯಿತು. ಸೀತಾನದಿಯಿಂದ ಇಚೆ ವಿಶಿಷ್ಠವಾದ ಭಾಷೆ, ಜೀವನ ಶೈಲಿಯನ್ನು ಕಾಣುತ್ತೇವೆ. ನೆರೆಯ ಭಟ್ಕಳ, ಹೊಸನಗರ ತಾಲೂಕಿನ ಭಾಗಗಳನ್ನು ಸೇರಿಸಿಕೊಂಡರೆ ಕುಂದಾಪುರವನ್ನು ಜಿಲ್ಲೆ ಮಾಡಲು ಸಾಧ್ಯ. ನಮ್ಮ ಬೇಡಿಕೆಯನ್ನು ಸರ್ಕಾರದ ಗಮನ ತಂದಿದ್ದೇವೆ ಎಂದು ಅಪ್ಪಣ್ಣ ಹೆಗ್ಡೆ ಹೇಳಿದರು.
ಮನು ಹಂದಾಡಿ, ಉದ್ಯಮಿ ಪ್ರವೀಣ್ ಕುಮಾರ್, ನಟ, ನಿರ್ದೇಶಕ ಓಂ ಗುರು, ಚಿತ್ರ ನಿರ್ಮಾಪಕ ಚಂದ್ರಶೇಖರ್, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ, ನಟ ರಾಹುಲ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಸೌಮ್ಯಶ್ರೀ ಹಾಗೂ ಸಂದೇಶ ಶೆಟ್ಟಿ ಸಲ್ವಾಡಿ ಕಾರ್ಯಕ್ರಮ ನಿರ್ವಹಿಸಿದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!