ಬೆಂಗಳೂರು : ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಕುಮಾರ್ ರಸ್ತೆಯಲ್ಲಿ ನಡೆದಿದೆ.
39 ವರ್ಷದ ರಮೇಶ್ ಮೃತ ದುರ್ದೈವಿಗಳು. ತಡರಾತ್ರಿ ಸುಮಾರು 1:30 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್ಆರ್ಟಿಸಿ ಬಸ್ ರಾಜ್ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್ಗೆ ಹೋಗ್ತಿತ್ತು. ಈ ವೇಳೆ ಬೈಕ್ನಲ್ಲಿ ಹೋಗ್ತಿದ್ದ ರಮೇಶ್, ಬಸ್ ಓವರ್ ಟೇಕ್ ಮಾಡಿ ಬಲತಿರುವು ಪಡೆದುಕೊಳ್ಳೋಕೆ ಹೋಗಿ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕುಡಿದು ಬೈಕ್ ಅಪಘಾತ ಮಾಡಿಕೊಂಡಿದ್ದು, ಘಟನೆ ನಂತರ ಮೃತನ ಸ್ನೇಹಿತರು ನಮಗೆ ಮನಬಂದಂತೆ ಥಳಿಸಿದ್ದಾರೆ ಅಂತಾ ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಮೃತನ ಸ್ನೇಹಿತರ ವಿರುದ್ದ ಆರೋಪಿಸಿದ್ದಾರೆ. ಅಪಘಾತವಾಗಿದ್ದ ಬೈಕ್ ಬಳಿ ಮದ್ಯದ ಬಾಟಲಿಗಳು ಕೂಡ ಪತ್ತೆಯಾಗಿದ್ದು, ಬೈಕ್ ಸವಾರ ಕುಡಿದು ಗಾಡಿ ಓಡಿಸಿದ್ದ ಶಂಕೆ ವ್ಯಕ್ತವಾಗಿದೆ.

