Connect with us

Hi, what are you looking for?

Diksoochi News

ರಾಜ್ಯ

WATCH : ಸಾಯೋಕೆ ನನ್ನ 1.5 ಕೋಟಿ ರೂ.ಕಾರೇ ಆಗಬೇಕಿತ್ತಾ?: ಬೈಕ್ ಸವಾರನ ಮೇಲೆ ಆಕ್ರೋಶಗೊಂಡ ಭವಾನಿ ರೇವಣ್ಣ; ವಿಡಿಯೋ ವೈರಲ್

1

ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಸವಾರನಿಗೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರು ತೀವ್ರ ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.

ಈ ವೇಳೆ ಆಕ್ರೋಶಿತರಾದ ಭವಾನಿ ರೇವಣ್ಣ ಕಾರಿನಿಂದ ಇಳಿದು, ಬೈಕ್‌ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement. Scroll to continue reading.

ವೀಡಿಯೋದಲ್ಲಿ ಏನಿದೆ ?

ವಿಡಿಯೋದಲ್ಲಿ ಭವಾನಿ ರೇವಣ್ಣ ಅವರು ಕಾರಿನಿಂದ ಇಳಿದು ಬಂದು ಬೈಕ್ ಸವಾರನ ಪರಿಸ್ಥಿತಿ ಹೇಗಿದೆ ಎಂದು ನೋಡಿಲ್ಲ ಬದಲಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ

ಅಷ್ಟೇ ಅಲ್ಲ… ಅವರ ನಾಲಗೆಯಿಂದ ಅವಾಚ್ಯ ಶಬ್ದಗಳೂ ಹೊರಬಂದಿವೆ. ಅದರೊಂದಿಗೆ, ‘ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ಟು ಹಾಕ್ರೋ ಈ ಗಾಡಿನ’ ಎಂದು ಹೇಳಿರುವುದು ಕಂಡು ಬಂದಿದೆ.

ಆಮೇಲೆ ತನ್ನ ಕಾರಿನ ಮುಂಭಾಗ ಡ್ಯಾಮೇಜ್‌ ಆಗಿರುವುದು ನೋಡಿದ ಭವಾನಿ ರೇವಣ್ಣ, ಬೈಕ್‌ ಸವಾರನ ಮೊಬೈಲ್‌ ಕಸಿದುಕೊಂಡು ಬೈಕ್‌ ಕೀ ಕಿತ್ತುಕೊಂಡಿದ್ದಾರೆ.

Advertisement. Scroll to continue reading.

” ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ರೂ.50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಗದರಿಸಿದ್ದಾರೆ.

ಇದು ಯಾವ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುತ್ತೆ. ಗಾಡಿ ಸೀಜ್‌ ಮಾಡಿಸು. ಈ ಗ್ರಾಮ ಎಸ್‌ಐ ಬರೋಕೆ ಹೇಳಿ ಎಂದು ಹೇಳಿದ್ದು, ಬೈಕ್‌ ಸವಾರ ಮತ್ತು ಹಿಂಬದಿ ಸವಾರನ ಫೋಟೋವನ್ನು ಕ್ಲಿಕ್ಕಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಘಟನೆ ಬಳಿಕ ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂಬಂಧ ಬೈಕ್‌ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

ಸದ್ಯ ಈ ವೀಡಿಯೋ ವೈರಲ್ ಆಗಿದ್ದು, ಭವಾನಿ ರೇವಣ್ಣ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!