Connect with us

Hi, what are you looking for?

Diksoochi News

ರಾಷ್ಟ್ರೀಯ

ಮಿಚಾಂಗ್ ಚಂಡಮಾರುತ ಎಫೆಕ್ಟ್: ಭಾರಿ ಮಳೆಗೆ ತತ್ತರಿಸಿದ ತಮಿಳುನಾಡು

1

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ ೫ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ರಾಜಧಾನಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ.

ಬೀಚ್‌ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ. ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.೪ ಮತ್ತು ೫ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.೩ರಿಂದ ೭ರವರೆಗೆ ಸುಮಾರು ೧೪೪ ರೈಲುಗಳ ಸೇವೆಯನ್ನು ರದ್ದಾಗಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಮೇಲೆ ಮಳೆನೀರು ನಿಂತ ಪರಿಣಾಮ ವಿಮಾನ ಸಂಚಾರ ಸ್ಥಗಿತವಾಗಿದೆ.

Advertisement. Scroll to continue reading.

ಭಾರೀ ಮಳೆ ಮುನ್ಸೂಚನೆ :

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ರ‍್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಡಿ.೩ರ ವೇಳೆಗೆ ಚಂಡಮಾರುತ ರೂಪುಗೊಂಡಿದ್ದು, ಅದು ಡಿ.೪ರಂದು ಅಂದರೆ ಇಂದು ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಅದು ಅಪ್ಪಳಿಸಲಿದೆ. ಇದರ ಪರಿಣಾಮ ೧೬ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಮಿಳುನಾಡು ರ‍್ಕಾರ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!