Connect with us

Hi, what are you looking for?

Diksoochi News

ಸಿನಿಮಾ

ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಯಶ್; ಈಗ ಸಮಯ ಬಂದಿದೆ ಎಂದ ರಾಕಿ ಭಾಯ್

2

ಚಂದನವನ : ಕೆಜಿಎಫ್ ಬಳಿಕ ರಾಕಿಂಗ್ ಸ್ಟಾರ್ ಮುಂದಿನ ಚಿತ್ರ ಯಾವುದು ಎಂದು ಎಲ್ಲರೂ ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಯಶ್ ಹೊಸ ಚಿತ್ರದ ತಯಾರಿಯಲ್ಲಿದ್ದಿದು ನಿಜ. ಆದರೆ, ಯಾವ ಚಿತ್ರ? ಏನ್ ಸಮಾಚಾರ ? ಒಂದು ಗೊತ್ತಿರದೆ ಯಾವಾಗಪ್ಪ ಅನೌನ್ಸ್ ಮಾಡ್ತಾರೆ ಅಂತ ಕಾದಿದ್ದೇ ಬಂತು…ಸಿನಿಮಾ ಅಪ್ಡೇಟ್ಸ್ ಕೊಡಿ ಭಾಯ್ ಅಂತ ಕಮೆಂಟ್ ಮಾಡಿದ್ದೇ ಬಂತು…ಊಹುಂ, ನಿರಾಸೆ! ಆದ್ರೆ ಈಗ ದಿಢೀರ್ ಅಂತ ರಾಕಿ ಭಾಯ್ ಖುಷಿ ವಿಷಯ ಕೊಟ್ಟಿದ್ದಾರೆ.

ಹೌದು, ಹೊಸ ಅಪ್ಡೇಟ್ ಕೊಡೋಕೆ ರಾಕಿ ಸಿದ್ಧರಾಗಿದ್ದಾರೆ. ಇದೇ ವಾರ ಅಭಿಮಾನಿಗಳಿಗೆ ರಾಕಿಭಾಯ್ ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ.

ಈಗ ಸಮಯ ಬಂದಿದೆ

Advertisement. Scroll to continue reading.

2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು. ಇದಾದ ಬಳಿಕ ಯಶ್ ಅವರ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ಹೊಸ ಸಿನಿಮಾ ಕುರಿತು ಇತ್ತೀಚೆಗೆ ಮಾತನಾಡಿದ್ದ ಅವರು, ಶೀಘ್ರವೇ ಮಾಹಿತಿ ನೀಡುವುದಾಗಿ ಹೇಳಿದ್ದರು. ಆದರೆ, ಈಗ ಅದೇನು ಅಂತ ಹೇಳೋಕು ದಿನಾಂಕ ನಿಗದಿ ಮಾಡಿದ್ದಾರೆ.

‘ಈಗ ಸಮಯ ಬಂದಿದೆ. ಡಿಸೆಂಬರ್ 8ರಂದು ಮುಂಜಾನೆ 9:55ಕ್ಕೆ ಟೈಟಲ್ ಅನೌನ್ಸ್ ಆಗಲಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಪೋಸ್ಟ್‌ ಮಾಡಿದ್ದಾರೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಈ ಪೋಸ್ಟರ್ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಯಾರು ಈ ಚಿತ್ರದ ನಿರ್ದೇಶಕರು? ಏನು ಕಾನ್ಸೆಪ್ಟ್? ಇತ್ಯಾದಿ ಪ್ರಶ್ನೆಗಳು ಈಗ ಅಭಿಮಾನಿಗಳಲ್ಲಿ ಸಹಜವಾಗೆ ಉದ್ಭವಿಸಿದ್ದು, ಉತ್ತರ ಸಿಗೋಕೆ ಡಿ.8 ರ ವರೆಗೆ ಕಾಯಬೇಕಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!