Connect with us

Hi, what are you looking for?

Diksoochi News

ರಾಜ್ಯ

ಅರ್ಜುನನನ್ನು ಕೊಂದ ಕಾಡಾನೆ ಸೆರೆ ಹಿಡಿದು ಜನರ ಮುಂದೆ ನಿಲ್ಲಿಸುತ್ತೇವೆ : ಮಾವುತರಿಂದ ಶಪಥ

0

ಹಾಸನ : ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಅಂಬಾರಿಯನ್ನು 8 ಬಾರಿ ಹೊತ್ತು ನಿವೃತ್ತಿ ಹೊಂದಿದ್ದ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿ ಸಾವನ್ನಪ್ಪಿದೆ. ಕಾರ್ಯಾಚರಣೆ ವೇಳೆ ಅರ್ಜುನನ್ನು ಕೊಲೆಗೈದ ಕಾಡಾನೆಯನ್ನು ನಾವು ಹಿಡಿದು ಜನರ ಮುಂದೆ ತಂದು ನಿಲ್ಲಿಸುತ್ತೇವೆ ಎಂದು ಅರ್ಜುನ ಆನೆಯ ಮಾವುತರು ಶಪಥ ಮಾಡಿದ್ದಾರೆ.

ಕಾಡಾನೆ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಅರ್ಜುನ ಆನೆಯ ಅಂತ್ಯಕ್ರಿಯೆ ನೆರವೇರಿಸಿದ ನಂತರ, ಮಾವುತರು ಕಾಡಾನೆಯನ್ನು ಸೆರೆ ಹಿಡಿದು ತಂದೇ ತರುತ್ತೇವೆ. ಅರಣ್ಯಾಧಿಕಾರಿಗಳೊಂದಿಗೆ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಅರ್ಜುನ ಆನೆಯ ಮಾವುತರು ಶಪಥ ಮಾಡಿದ್ದಾರೆ. ಅರ್ಜುನನ್ನು ಕೊಂದ ಕಾಡಾನೆಯನ್ನು ಜನರ ಮುಂದೆ ಸೆರೆಹಿಡಿದು ತಂದೇ ತರ್ತೇವೆ ಎಂದು ಹಿರಿಯ ಮಾವುತ ಗುಂಡಣ್ಣ ಹೇಳಿದ್ದಾರೆ.


ಅರ್ಜುನ ಆನೆಯನ್ನು ಕಳೆದುಕೊಂಡು ದುಃಖದಲ್ಲಿರುವ ಮಾವುತರಿಗೆ ಬಿಕ್ಕೋಡು ಕ್ಯಾಂಪ್‌ನಲ್ಲಿ ಸಾಂತ್ವನ ಹೇಳಲು ಬಂದಿದ್ದ ಅರಣ್ಯಾಧಿಕಾರಿಗಳೊಂದಿಗೆ ನೋವು ತೋಡಿಕೊಂಡು ಮಾವುತ ಗುಂಡಣ್ಣ, ನಾವು ಮತ್ತೊಮ್ಮೆ ಕಾರ್ಯಾಚರಣೆ ಸಿದ್ದ ಮಾಡುತ್ತೇವೆ ಎಂದು ಹೇಳಿದ್ದಾರೆ.

Advertisement. Scroll to continue reading.

ಅರ್ಜುನನ್ನ ಕಳೆದುಕೊಂಡು ಚಿಂತೆಯಾಗಿದೆ. ನಮಗೂ ನೋವಾಗಿದೆ, ಆದ್ರೆ ಮನಸ್ಸು ಗಟ್ಟಿಮಾಡಿಕೊಂಡಿದ್ದೇವೆ. ಯಾರೂ ಏನೂ ಮಾಡೋದಕ್ಕೆ ಆಗಲ್ಲ, ಮತ್ತೆ ಬರುತ್ತೇವೆ. ನಾವು ಅದನ್ನ ಹಿಡಿಯೋ ಆಸೆಯಿದೆ ಮತ್ತೆ ಇದೇ ಕ್ಯಾಂಪ್‌ಗೆ ಬರ್ತೇವೆ. ಅದನ್ನ ಹಿಡಿದು ಜನರು ಅದನ್ನ ನೋಡಬೇಕು ಹಾಗೆ ನಾವು ಮಾಡ್ತೇವೆ ಎಂದು ಹೇಳಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!