Connect with us

Hi, what are you looking for?

Diksoochi News

ಸಿನಿಮಾ

ಯಶ್ ಹೊಸ ಚಿತ್ರದ ಟೈಟಲ್, ಬಿಡುಗಡೆ ದಿನಾಂಕ ಘೋಷಣೆ

1

ಚಂದನವನ : ಕೆಜಿಎಫ್ ಬಳಿಕ ರಾಕಿಂಗ್ ಸ್ಟಾರ್ ಮುಂದಿನ ಚಿತ್ರ ಯಾವುದು ಎಂದು ಎಲ್ಲರೂ ಚಾತಕಪಕ್ಷಿಯಂತೆ ಕಾಯುತ್ತಿದ್ದರಯ. ಯಶ್ ಹೊಸ ಚಿತ್ರದ ತಯಾರಿಯಲ್ಲಿದ್ದಿದು ಗೊತ್ತತ್ತು. ಆದರೆ, ಯಾವ ಚಿತ್ರ? ಏನ್ ಸಮಾಚಾರ ? ಒಂದು ಗೊತ್ತಿರದೆ ಯಾವಾಗಪ್ಪ ಅನೌನ್ಸ್ ಮಾಡ್ತಾರೆ ಅಂತ ಕಾದಿದ್ದೇ ಬಂತು…ಈ ನಡುವೆ 4 ದಿನಗಳ ಹಿಂದೆ ಡಿ.8 ರಂದು ಖುಷಿ ಸುದ್ದಿ ಕೊಡುವ ಬಗ್ಗೆ ಅವರು ಹೇಳಿದ್ದರು. ಅಂತೆಯೇ ಇಂದು ತಮ್ಮ ಹೊಸ ಚಿತ್ರದ ಶೀರ್ಷಿಕೆ,ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.

ಹೌದು, ಯಶ್ ಹೊಸ ಚಿತ್ರ ‘ಟಾಕ್ಸಿಕ್’.

ಸುಳಿವು ನೀಡಿದ್ದ ಯಶ್ :

Advertisement. Scroll to continue reading.

2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು. ಇದಾದ ಬಳಿಕ ಯಶ್ ಅವರ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಮೂಡಿತ್ತು.

‘ಈಗ ಸಮಯ ಬಂದಿದೆ. ಡಿಸೆಂಬರ್ 8ರಂದು ಮುಂಜಾನೆ 9:55ಕ್ಕೆ ಟೈಟಲ್ ಅನೌನ್ಸ್ ಆಗಲಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಪೋಸ್ಟ್‌ ಮಾಡಿದ್ದರು. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವ ಬಗ್ಗೆ ಸುಳಿವು ಸಿಕ್ಕಿತ್ತು. ಇದೀಗ ಚಿತ್ರದ ಅಪ್ಡೇಟ್‌ ಸಿಕ್ಕಿದೆ.

ಗೀತು ಮೋಹನ್ ದಾಸ್ ನಿರ್ದೇಶನ :

ಯಶ್ ‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

Advertisement. Scroll to continue reading.

ಡ್ರಗ್ಸ್ ಮಾಫಿಯಾ ಕುರಿತಾದ ಕಥೆ ಎನ್ನುವ ಸುಳಿವು ಸಿಗುತ್ತಿದೆ. 60,70ರ ದಶಕದ ಗೋವಾ ಡ್ರಗ್ಸ್ ಮಾಫಿಯಾ ಕಥೆ ಹಂದಾರ ಚಿತ್ರದಲ್ಲಿದೆ ಎನ್ನಲಾಗುತ್ತಿದೆ.

2025 ಕ್ಕೆ ಬಿಡುಗಡೆ :

‘ಟಾಕ್ಸಿಕ್’ ಸಿನಿಮಾ ಟೈಟಲ್ ಜೊತೆಗೆ ಚಿತ್ರ ಬಿಡುಗಡೆಯ ದಿನಾಂಕವೂ ಘೋಷಣೆಯಾಗಿದೆ. 2025, ಏಪ್ರಿಲ್ 10ರಂದು ಸಿನಿಮಾ ತೆರೆಗೆ ಬರಲಿದೆ. ‘ಟಾಕ್ಸಿಕ್’ ಅಂದರೆ ವಿಷಪೂರಿತ ಎನ್ನುವ ಅರ್ಥ ಬರುತ್ತದೆ.

ಸದ್ಯ ಯಶ್ ಹೊಸ ಚಿತ್ರದ ಅಪ್ಡೇಟ್‌ ಅಭಿಮಾನಿಗಳಂತೂ ಖುಷಿ ಕೊಟ್ಟಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!