Connect with us

Hi, what are you looking for?

Uncategorized

ವಿದ್ಯಾರ್ಥಿನಿಗೆ ಅರ್ಧ ಗಂಟೆ ತನ್ನ ಹುದ್ದೆ ಬಿಟ್ಟು ಕೊಟ್ಟ ಉಡುಪಿ ಜಿಪಂ ಸಿಇಒ!

0

ಉಡುಪಿ : ಸಾಮಾಜಿಕ ಕಳಕಳಿಯ ಪ್ರಶ್ನೆಗಳನ್ನು ಕೇಳಿದ ವಿದ್ಯಾರ್ಥಿನಿಯೊಬ್ಬಳಿಗೆ ಜಿ.ಪಂ.ಸಿಇಒ ಅರ್ಧಗಂಟೆ ತನ್ನ ಹುದ್ದೆ ಬಿಟ್ಟುಕೊಟ್ಟಿರುವ ಘಟನೆ ನಡೆದಿದೆ. ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸೆಸೆಲ್ಸಿ ವಿದ್ಯಾರ್ಥಿನಿ ವರ್ಷಾ ಅವಕಾಶ ಗಿಟ್ಟಿಸಿಕೊಂಡ ವಿದ್ಯಾರ್ಥಿನಿ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪ್ರತಿಭಾನ್ವಿತ ಬಾಲಕಿಯರಿಗೆ ಇಂದು ಉಡುಪಿ ಜಿಪಂ ಸಭಾಂಗಣದಲ್ಲಿ ಕಾರ್ಯಗಾರದ ಸಂವಾದ ಏರ್ಪಡಿಸಲಾಗಿತ್ತು. ಸಂವಾದದಲ್ಲಿ ಮಕ್ಕಳು ಸ್ವಚ್ಛತೆ, ಗ್ರಾಮೀಣ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ ಮೊದಲಾದ ಪ್ರಶ್ನೆಗಳನ್ನು ಸಿಇಒಗೆ ಕೇಳಿದರು. ಈ ವೇಳೆ ಸಾಮಾಜಿಕ ಕಳಕಳಿಯ ಹಲವು ಪ್ರಶ್ನೆಗಳನ್ನು ಕೇಳಿದ ವರ್ಷಾಳಿಗೆ ಸಿಇಒ ಡಾ.ನವೀನ್ ಭಟ್, ತನ್ನ ಹುದ್ದೆ ಬಿಟ್ಟು ಕೊಟ್ಟು, ಕುರ್ಚಿಯ ಮೇಲೆ ಕೂರಿಸಿದರು. ಈ ವೇಳೆ ವರ್ಷಾ ಪ್ಲಾಸ್ಟಿಕ್ ವಿಲೇವಾರಿ, ಗ್ರಾಮಗಳಲ್ಲಿ ಚರಂಡಿ ವ್ಯವಸ್ಥೆ, ನಿರುದ್ಯೋಗ ನಿವಾರಣೆ ಕುರಿತು ಸಿಇಒ ಬಳಿ ಚರ್ಚಿಸಿದ್ದು, ಆಕೆಯ ಪ್ರಶ್ನೆಗಳಿಗೆ ಉತ್ತರ ನೀಡಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!