Connect with us

Hi, what are you looking for?

Diksoochi News

ರಾಜ್ಯ

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪ್ರಶ್ನಿಸಿ ಅರ್ಜಿ: ವಿಚಾರಣೆ ಜ. 5ಕ್ಕೆ ಮುಂದೂಡಿಕೆ

0

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದು, ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿಗೆ ನೀಡಿದ ಹೈಕೋರ್ಟ್, ಜನವರಿ 5 ರಂದು ವಿಸ್ತೃತವಾದ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

Advertisement. Scroll to continue reading.

ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019 ರಂದು ಅನುಮತಿ ನೀಡಿತ್ತು. 

ಸರ್ಕಾರ ಬದಲಾದ ನಂತರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28, 2023 ರಂದು ಹಿಂತೆಗೆದುಕೊಳ್ಳಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

error: Content is protected !!