Connect with us

Hi, what are you looking for?

Diksoochi News

ರಾಜ್ಯ

ಓಡಿಹೋಗಿ ಮದುವೆಯಾದ ಪ್ರೇಮಿಗಳು; ಹುಡುಗನ ಮನೆಗೆ ನುಗ್ಗಿ ಹಲ್ಲೆ, ನಾಲ್ಕು ಮಂದಿಯ ಬಂಧನ

1

ಚಿಕ್ಕಬಳ್ಳಾಪುರ:  ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶಗೊಂಡ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿರುವ ಘಟನೆ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ಪೋಷಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆ ನಡೆಸಿದ ಹುಡುಗಿಯ ತಂದೆ ಮತ್ತು ಆತನ ಮೂವರು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಯುವಕ, ಯುವತಿ ಒಂದೇ ಜಾತಿ, ಒಂದೇ ಸಮುದಾಯದವರಾಗಿದ್ದು, ಅಕ್ಕ-ಪಕ್ಕದ ನಿವಾಸಿಗಳು. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದರೆ, ಇಬ್ಬರೂ ಸೋಮವಾರ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು.

Advertisement. Scroll to continue reading.

ಮರುದಿನ ಯುವತಿಯ ಮನೆಯವರಿಗೆ ವಿಷಯ ತಿಳಿದಿದೆ. ಹೀಗಾಗಿ ಅವರು ಹುಡುಗನ ಮನೆಗೆ ತೆರಳಿ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಹುಡುಗನ ಮನೆಯವರ ಮೇಲೆ ಹುಡುಗಿ ಕಡೆಯವರು ಹಲ್ಲೆ ನಡೆಸಿದ್ದಾರೆ.

ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement. Scroll to continue reading.

ತಮ್ಮ ಮೇಲೆ ಐದಕ್ಕೂ ಹೆಚ್ಚು ಮಂದಿ ರಾಡ್ ಮತ್ತು ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹುಡುಗನ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 148, 149, 323 ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಕ್ಕೆ ತೆರೆಬಿದ್ದಿದೆ. ದೆಹಲಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿ ಅಭೂತಪೂರ್ವ...

ರಾಜ್ಯ

1 ಬೆಂಗಳೂರು: ರಾಜ್ಯದಲ್ಲಿ ಮುಂದಿನ 2-3 ದಿನಗಳಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್ ಮತ್ತು ಕಲಬುರಗಿಯಲ್ಲಿ ಭಾನುವಾರ ತುಂತುರು ಮಳೆಯಾಗಿದ್ದು, ಇನ್ನೆರಡು ಮೂರು ದಿನಗಳಲ್ಲಿ ದಕ್ಷಿಣ ಒಳನಾಡು...

ರಾಷ್ಟ್ರೀಯ

0 ಶ್ರೀನಗರ: ಈ ಹಿಂದೆಲ್ಲಾ ಕಲ್ಲೆಸೆತಕ್ಕೆ ಸುದ್ದಿಯಾಗುತ್ತಿದ್ದ ಕಾಶ್ಮೀರ ಈಗ ಬದಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಅಲ್ಲಿ ಫಾರ್ಮುಲಾ-4 ಕಾರ್‌ ರೇಸ್‌ ನಡೆದಿದೆ. ಶ್ರೀನಗರದ ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ...

ಕರಾವಳಿ

1 ಮಂಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಐದು ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ...

ಅಂತಾರಾಷ್ಟ್ರೀಯ

0 ಮಾಸ್ಕೋ: ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾದಿಮಿರ್‌ ಪುಟಿನ್‌ ಭರ್ಜರಿ ಶೇ.87ರಷ್ಟು ಮತಗಳಿಸುವ ಮೂಲಕ ಸತತ ಗೆಲುವು ಸಾಧಿಸಿದ್ದು, ರಷ್ಯಾದ ಇತಿಹಾಸದಲ್ಲೇ ದೀರ್ಘಕಾಲ ಅಧ್ಯಕ್ಷಗಾದಿ ಏರಿದ ಹೆಗ್ಗಳಿಕೆಗೆ ಪುಟಿನ್‌ ಪಾತ್ರರಾಗಿದ್ದಾರೆ. ಕಮ್ಯೂನಿಸ್ಟ್ ಪಾರ್ಟಿ ಆಫ್...

error: Content is protected !!