Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸರಕಾರದ ಯೋಜನೆಗಳನ್ನು ನಾಗರಿಕರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

2

 ಉಡುಪಿ : ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಶನಿವಾರ ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಸೇವಾಸಿಂಧು / ಗ್ರಾಮ ಒನ್ ಜಿಲ್ಲಾಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಜಿಲ್ಲೆಯ  ಗ್ರಾಮ ಒನ್ ಕೇಂದ್ರದ ನಿರ್ವಾಹಕರಿಗೆ ನಡೆದ ಜಿಲ್ಲಾಮಟ್ಟದ ಕ್ರೀಡೋತ್ಸವ “ಗ್ರಾಮ ಒನ್ ಕ್ರೀಡಾ ಹಬ್ಬ – 2023” ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. 

Advertisement. Scroll to continue reading.

 ಈಗಾಗಲೇ ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರಿಗೆ ಯಶಸ್ವ್ವಿಯಾಗಿ ಸೇವೆ ಒದಗಿಸಲಾಗಿದೆ. ದಿನಂಪ್ರತಿ ಜಿಲ್ಲೆಯ ನಾಗರಿಕರಿಗೆ ಸರಕಾರಿ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳು ಸಕ್ರೀಯವಾಗಿ ಕ್ರೀಡೆಯಲ್ಲಿ ಭಾಗವಹಿಸಿ, ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದರು.

  ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಆರ್, ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸೇವಾಸಿಂಧು /ಗ್ರಾಮ ಒನ್ ಇದರ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಗ್ರಾಮ ಒನ್ ಜಿಲ್ಲಾ ಸಂಯೋಜಕ ನಾಗೇಶ್ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!