Connect with us

Hi, what are you looking for?

Diksoochi News

ಕ್ರೀಡೆ

ಒಡೆದ ಹೃದಯಗಳನ್ನು ಹಂಚಿಕೊಂಡ ಮೊಹಮ್ಮದ್‌ ಸಿರಾಜ್‌; ಅಭಿಮಾನಿಗಳಲ್ಲಿ ಗೊಂದಲ!

0

ನವದೆಹಲಿ : ಭಾರತ ಕ್ರಿಕೆಟ್‌ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದನ್ನು ಹಾಕಿದ್ದು, ಸದ್ಯ ಇದು ಸೋಶಿಯಲ್‌ ಮೀಡಿಯಾದಲ್ಲಿ ಸಂಚಲನ ಉಂಟು ಮಾಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿತ್ತು. ಅವರು ಟೆಸ್ಟ್ ತಂಡದ ಭಾಗವಾಗಿದ್ದಾರೆ.

ಈ ನಡುವೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಕೆಲವು ಒಡೆದ ಹೃದಯವನ್ನು ಹಂಚಿಕೊಂಡಿದ್ದಾರೆ. ದುಬೈನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಟಗಾರರ ಹರಾಜಿನ ಬಗ್ಗೆ ಎಲ್ಲಾ ಚರ್ಚೆಗಳ ನಡುವೆ, ಸಿರಾಜ್ ಅವರ ಈ ಪೋಸ್ಟ್ ಅಚ್ಚರಿ ಹುಟ್ಟು ಹಾಕಿದೆ.

Advertisement. Scroll to continue reading.

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಏನನ್ನೂ ಉಲ್ಲೇಖಿಸದೆ, ಅವರು ಮುರಿದ ಐದು ಹೃದಯದ ಎಮೋಜಿಗಳನ್ನು ಹಂಚಿಕೊಂಡಿದ್ದಾರೆ. ಈ ತಿಂಗಳ ಆರಂಭದಲ್ಲಿ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸಿರಾಜ್ ಕೊನೆಯದಾಗಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಡಿಸೆಂಬರ್ 26 ರಂದು ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯ ಸೆಂಚುರಿಯನ್‌ನಲ್ಲಿ ಪ್ರಾರಂಭವಾಗಲಿದೆ. ಆ ಮೂಲಕ ಈ ಟೆಸ್ಟ್ ಸರಣಿಯಲ್ಲಿ ಸಿರಾಜ್‌ ಕಾಣಿಸಿಕೊಳ್ಳಲಿದ್ದಾರೆ.

ಅಲ್ಲದೇ, ಈ ವಾರದ ಆರಂಭದಲ್ಲಿ ದುಬೈನಲ್ಲಿ ನಡೆದ ಆಟಗಾರರ ಹರಾಜಿಗೆ ಮುಂಚಿತವಾಗಿ ಆರ್‌ಸಿಬಿ ಸಿರಾಜ್ ಅವರನ್ನು ಉಳಿಸಿಕೊಂಡಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!