Connect with us

Hi, what are you looking for?

Diksoochi News

ರಾಜ್ಯ

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧಾರ್ಮಿಕ ನೆಲೆಯಲ್ಲಿ ವಿಭಜಿಸುತ್ತಿದೆ: ಬಿ.ವೈ.ವಿಜಯೇಂದ್ರ

1

ಬೆಂಗಳೂರು : ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹಿಜಾಬ್ ನಿಷೇಧ ಸಾಕಷ್ಟು ಸದ್ದು ಮಾಡಿತ್ತು. ಉಡುಪಿಯಿಂದ ಆರಂಭಗೊಂಡಿದ್ದ ಈ ವಿವಾದ ಸುಪ್ರೀಂ ಕೋರ್ಟ್‌ವರೆಗೂ ಲಗ್ಗೆ ಇಟ್ಟಿತ್ತು. ಇದೀಗ ಶುಕ್ರವಾರವಷ್ಟೇ ಸಿಎಂ ಸಿದ್ದರಾಮಯ್ಯ ‘ಹಿಜಾಬ್ ನಿಷೇಧ ಹಿಂಪಡೆಯಲು ತಿಳಿಸಿದ್ದೇನೆ’ ಎಂಬ ಹೇಳಿಕೆ ನೀಡಿದ್ದರು. ಇದರಿಂದ ಬಿಜೆಪಿ ಆಕ್ರೋಶಿತಗೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಈ ಕುರಿತು ಅಸಮಾಧಾನ ಹೊರ ಹಾಕಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ನಮ್ಮ ಶೈಕ್ಷಣಿಕ ಜಾಗಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ ಎಂದಿದ್ದಾರೆ.

Advertisement. Scroll to continue reading.

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸರ್ಕಾರ ಯುವ ಮನಸ್ಸುಗಳನ್ನು ಧಾರ್ಮಿಕ ನೆಲೆಯಲ್ಲಿ ವಿಭಜಿಸುವುದನ್ನು ಉತ್ತೇಜಿಸುತ್ತಿದೆ, ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ. ವಿಭಜಿಸುವ ಪ್ರಕ್ರಿಯೆ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡುವುದು ಮತ್ತು ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಕೇಂದ್ರೀಕರಿಸುವ ವಾತಾವರಣವನ್ನು ಬೆಳೆಸುವುದು ಮುಖ್ಯವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ನಗರದ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್‌ನಲ್ಲಿ 6 ನಿಮಿಷದ ವಿಡಿಯೋ ಪತ್ತೆಯಾಗಿದೆ. ಪ್ರಕರಣಕ್ಕೆ...

ಸಿನಿಮಾ

2 ಬೆಂಗಳೂರು: ತಮ್ಮ 40ರ ಆಸುಪಾಸಿನಲ್ಲಿದ್ದರೂ, ಎಳೆ ಹುಡುಗಿಯರಿಗೂ ಕಡಿಮೆ ಇಲ್ಲದಂತೆ ಮೈಮಾಟ ತೋರಿಸುವ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಿದ್ದ ಕಿರುತೆರೆ ನಟಿ ಜ್ಯೋತಿ ರೈ ಈಗ ಕೆಟ್ಟ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ...

ಕ್ರೀಡೆ

0 ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ...

ರಾಷ್ಟ್ರೀಯ

0 ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ. ದಕ್ಷಿಣ...

ರಾಷ್ಟ್ರೀಯ

1 ಮುಂಬೈ: ಬೀದಿ ಬದಿಯಲ್ಲಿ ಚಿಕನ್ ಬೀದಿ ಬದಿಯಲ್ಲಿ ಚಿಕನ್ ಶವರ್ಮಾ ತಿಂದ ಯುವಕನೊಬ್ಬ ಮೃತಪಟ್ಟಿದ್ದು, ಐವರು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಮನ್‌ಖುರ್ದ್‌ನ ನಗರದಲ್ಲಿ ನಡೆದಿದೆ ಪ್ರಥಮೇಶ್ ಭೋಕ್ಷೆ (19) ಮೃತ ಯುವಕ....

error: Content is protected !!