Connect with us

Hi, what are you looking for?

Diksoochi News

ಕರಾವಳಿ

ಸುಳ್ಯ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಪಾದಚಾರಿ ಸಾವು

0

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಜಾಲ್ಸೂರಿನಲ್ಲಿ ಗುರುವಾರ ನಡೆದಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (71) ಮೃತಪಟ್ಟವರು.

ಪುರುಷೋತ್ತಮ ಅವರು ಜಾಲ್ಸೂರಿನ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್‌ ಅವರಿಗೆ ಡಿಕ್ಕಿ ಹೊಡೆದಿದೆ.

Advertisement. Scroll to continue reading.

ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎನ್ನಲಾಯ.

ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!