ಧಾರವಾಡ : ಶಬರಿ ಮಲೆಗೆ ಹೋಗಿ ದೇವರ ದರ್ಶನ ಪಡೆದು ಬರುವಾಗ ಅಫಘಾತ ಸಂಭವಿಸಿ, 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳದ ಮನಪುರಂನ ಯಡಪ್ಪಾಲ ಎಂಬಲ್ಲಿ ಅಪಘಾತ ನಡೆದಿದ್ದು, ಧಾರವಾಡದ ಬಾಲಕ ಸಾವನ್ನಪ್ಪಿದ್ದಾನೆ.
ಸುಮಿತ್ ಪಾಂಡೆ (10) ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ ಟಾಟಾ ಏಸ್ ವಾಹನದಲ್ಲಿ ಅಯ್ಯಪ್ಪ ಮಾಲೆಧಾರಿಗಳು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಅಪಘಾತ ಸಂಭವಿಸಿದೆ.
Advertisement. Scroll to continue reading.

ಇನ್ನುಳಿದ ಸೂರಜ್ ಪಾಡೆ, ನಿಖಿಲ್ ಪಾಂಡೆ ಹಾಗೂ ಸುಶಾಂತ್ ಪಾಂಡೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ.
ಮೃತ ಸುಮಿತ್ ಪಾಂಡೆ ಪಾರ್ಥಿವ ಶರೀರವನ್ನು ಧಾರವಾಡಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.
