ಉಡುಪಿ: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾAಧಿ ರಾಷ್ಟಿçÃಯ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಕಾರ್ಕಳ ತಾಲೂಕಿಗೆ ಸಂಬAಧಿಸಿದ ಗ್ರಾಮಗಳ ತಾಲೂಕು ಮಟ್ಟದ ಪಿಂಚಾಣಿ ಅದಾಲತ್ ಕಾರ್ಯಕ್ರಮವು ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಛೇರಿಯಲ್ಲಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪಿಂಚಾಣಿ ಅದಾಲತ್ ನಲ್ಲಿ ಕಾರ್ಕಳ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬAಧಪಟ್ಟ ಪಿಂಚಣಿ ಈಗಾಗಲೇ ಅರ್ಜಿ ಸಲ್ಲಿಸಿ, ಕೋರಿಕೆ ತಿರಸ್ಕೃತಗೊಂಡಿರುವವರು, ಪಿಂಚಣಿ ಬಾರದಿರುವ ಹಾಗೂ ಪಿಂಚಣಿಗೆ ಸಂಬAಧಿಸಿದ ಇನ್ನಿತರ ದೂರುಗಳ ಫಲಾನುಭನಿಗಳು ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕಾರ್ಕಳ ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.
Advertisement. Scroll to continue reading.