Connect with us

Hi, what are you looking for?

ಕರಾವಳಿ

ಮಂಗಳೂರು : ಗಾಂಜಾ ಸೇವನೆ ಮತ್ತು ಮಾರಾಟ : ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

1

ಮಂಗಳೂರು: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ವೈದ್ಯರು, ಮಹಿಳಾ ವೈದ್ಯಕೀಯ ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.

ಮಂಗಳೂರಿನಲ್ಲಿ ವಾಸವಿದ್ದ ಸಾಗರೋತ್ತರ 38 ವರ್ಷದ ವಿದ್ಯಾರ್ಥಿ, ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿರುವ 32 ವರ್ಷದ ಕೇರಳದ ವೈದ್ಯಾಧಿಕಾರಿ, ಕೆಎಂಸಿ ಮಣಿಪಾಲದಲ್ಲಿ ಮೆಡಿಕಲ್ ಸರ್ಜನ್ ಆಗಿರುವ ತಮಿಳುನಾಡಿನ 28 ವರ್ಷದ ವೈದ್ಯ, ಕೆಎಂಸಿ ಮಂಗಳೂರಿನಲ್ಲಿ ಓದುತ್ತಿರುವ ಕೇರಳದ 24 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ, ಆಂದ್ರಪ್ರದೇಶದ ವಿದ್ಯಾರ್ಥಿನಿ, ಕೆಎಂಸಿ ಮಂಗಳೂರಿನ ನಾಲ್ಕನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ, ಪಂಜಾಬ್‌ ನ 22 ವಿದ್ಯಾರ್ಥಿನಿ, ಕೆಎಂಸಿ ಮಂಗಳೂರಿನ ಮೂರನೇ ವರ್ಷದ ದೆಹಲಿಯ ವಿದ್ಯಾರ್ಥಿ, ಕೆಎಂಸಿ ಮಂಗಳೂರಿನ ನಾಲ್ಕನೆ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ, ಪುಣೆಯ 23 ವರ್ಷದ ವಿದ್ಯಾರ್ಥಿನಿ, ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯ ಮೂರನೇ ವರ್ಷದ ಎಂಡಿ ಪಿಸಿಯಾಟ್ರಿಕ್ ವಿದ್ಯಾರ್ಥಿನಿ, ಬಂಟ್ವಾಳ ತಾಲೂಕಿನ 34 ವರ್ಷದ ವಿದ್ಯಾರ್ಥಿ ಬಂಧಿತ ಆರೋಪಿಗಳು.

ಈ ಬಗ್ಗೆ ಮಾಹಿತಿ ನೀಡಿ ಮಂಗಳೂರು ಕಮಿಷ್ನರ್ ಶಶಿಕುಮಾರ್, ಜ.7 ರಂದು ಬಿಡಿಎಸ್ ವಿದ್ಯಾರ್ಥಿ, ಯುಕೆಯ ವಿದ್ಯಾರ್ಥಿ ಇದ್ದ ಫ್ಲ್ಯಾಟ್ ಮೇಲೆ ದಾಳಿ ಮಾಡಿ ಆತನಿಂದ ಎರಡು ಕೆ.ಜಿ ಗಾಂಜಾ, ಆಟಿಕೆ ಪಿಸ್ತೂಲ್, ಎರಡು ಮೊಬೈಲ್ ಫೋನ್ ಮತ್ತು ಡಿಜಿಟಲ್ ತೂಕ‌ ಮಾಪನ ವಶಪಡಿಸಿಕೊಳ್ಳಲಾಗಿತ್ತು. ಆತನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಸೇವನೆ ಮತ್ತು ಮಾರಾಟದ ಮಾಹಿತಿ ಸಿಕ್ಕಿದೆ. ದಾಳಿ ನಡೆಸಿ ಮತ್ತೆ 9 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement. Scroll to continue reading.

ಬಂಧಿತ 9 ಮಂದಿಯಲ್ಲಿ ಇಬ್ಬರು ವೈದ್ಯರಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ‌. ಇವರಲ್ಲಿ ನಾಲ್ಕು ಮಂದಿ ವಿದ್ಯಾರ್ಥಿನಿಯರು. ಇವರು ಪ್ರಮುಖ ಡ್ರಗ್ ಪೆಡ್ಲರ್ ನೀಲ್‌ನಿಂದ ಗಾಂಜಾವನ್ನು ಪಡೆದು ಸೇವನೆ ಮತ್ತು ಮಾರಾಟ ಮಾಡುತ್ತಿದ್ದರು. ಇವರನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಗಾಂಜಾ ಸೇವನೆ ಮಾಡಿದ್ದು, ಇವರಲ್ಲಿ ಯಾರು ಯಾರು ಪೆಡ್ಲರ್ ಆಗಿದ್ದವರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇವರು ಮಂಗಳೂರಿನ ವಿವಿಧ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದರು. ಅಪಾರ್ಟ್ಮೆಂಟ್ ಹಾಗೂ ಪಿಜಿಗಳನ್ನು ಬಾಡಿಗೆ ನೀಡುವ ಮಾಲೀಕರುಗಳು ತಾವು ಬಾಡಿಗೆಗೆ ನೀಡಿದ ಮನೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಗಮನಿಸಬೇಕು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!