Connect with us

Hi, what are you looking for?

Diksoochi News

ರಾಷ್ಟ್ರೀಯ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಮಹಾ ಸ್ಪೀಕರ್ ತೀರ್ಪು

0

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ ‘ನಿಜವಾದ ಶಿವಸೇನೆ’ ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದಾರೆ. ಮಾಜಿ ಸಿಎಂ, ಯುಬಿಟಿ ಬಣದ ನಾಯಕ ಉದ್ಧವ್ ಠಾಕ್ರೆ ಅವರಿಗೆ ಏಕನಾಥ್ ಶಿಂಧೆ ಅವರನ್ನು ತೆಗೆದುಹಾಕುವ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

2022 ರಲ್ಲಿ ಶಿವಸೇನಾದಲ್ಲಿ ಒಡಕುವುಂಟಾಗಿ ಎರಡು ಬಣಗಳಾಗಿ ವಿಭಜನೆ ಆಗಿ 18 ತಿಂಗಳ ನಂತರ ಇಂದು ಸಂಜೆ ಸ್ಪೀಕರ್ ರಾಹುಲ್ ಅವರು ಬಹು ನಿರೀಕ್ಷಿತ ತೀರ್ಪನ್ನು ಪ್ರಕಟಿಸಿದ್ದಾರೆ. ಶಿಂಧೆ ಅವರ ಬಣವೇ “ನಿಜವಾದ” ಶಿವಸೇನೆ ಎಂದು ಹೇಳಿದ್ದಾರೆ. ಅಲ್ಲದೆ, ಸಿಎಂ ಶಿಂಧೆ ಮತ್ತು ಅವರ ಬೆಂಬಲಿಗ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಠಾಕ್ರೆ ಬಣದ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

ಸಿಎಂ ಏಕನಾಥ್ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ಅನರ್ಹತೆಯ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಅಲ್ಲದೇ, ನಾಯಕತ್ವದ ರಚನೆಯನ್ನು ನಿರ್ಧರಿಸಲು ಪಕ್ಷದ 2018 ರ ಸಂವಿಧಾನವನ್ನು ಉಲ್ಲೇಖಿಸಿದ್ದಾರೆ. 

Advertisement. Scroll to continue reading.

ಶಿವಸೇನಾದ ಎರಡು ಬಣಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಸಂವಿಧಾನದ ಬಗ್ಗೆ ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿವೆ. ಏಕೈಕ ಅಂಶವೆಂದರೆ ಶಾಸಕಾಂಗ ಪಕ್ಷದಲ್ಲಿ ಬಹುಮತ. ವಿವಾದದ ಮೊದಲು ಅಸ್ತಿತ್ವದಲ್ಲಿದ್ದ ನಾಯಕತ್ವ ರಚನೆಯನ್ನು ಗಣನೆಗೆ ತೆಗೆದುಕೊಳ್ಳಬೇಕಾದ ಸಂಬಂಧಿತ ಸಂವಿಧಾನವನ್ನು ನಾನು ನಿರ್ಧರಿಸಬೇಕಾಗಿದೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.

ಉದ್ಧವ್ ಠಾಕ್ರೆ  ಏಕನಾಥ್ ಶಿಂಧೆಯನ್ನು ನಾಯಕ ಸ್ಥಾನದಿಂದ ತೆಗೆದುಹಾಕುವ ಹಕ್ಕು ಹೊಂದಿಲ್ಲ. ಶಿವಸೇನೆಯ ಯಾವುದೇ ಸದಸ್ಯರನ್ನು ತೆಗೆದುಹಾಕುವ ಹಕ್ಕು ಉದ್ಧವ್‌ಗೆ ಇಲ್ಲ. ಶಿಂಧೆ ಅವರನ್ನು ಪದಚ್ಯುತಗೊಳಿಸಲು ಉದ್ಧವ್‌ ಅವರಿಗೆ ಬಹುಮತ ಬೇಕು, ಅದು ಅವರ ಬಳಿ ಇಲ್ಲ. ಒಬ್ಬ ವ್ಯಕ್ತಿಯನ್ನು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕಾಗಿ ಅವರು ಯಾರನ್ನಾದರೂ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!