ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಕಾರ್ಯಗಳು ಆರಂಭವಾಗಿವೆ. ಬಿಜೆಪಿ ಎಂ ಎಲ್ ಸಿ ಹೆಚ್.ವಿಶ್ವನಾಥ್ ಹಾಗೂ ಸಂದೇಶ್ ನಾಗರಾಜ್ ಪಕ್ಷ ತೊರೆದು ಕಾಂಗ್ರೆಸ್ನತ್ತ ಮತ್ತೆ ಒಲವು ತೋರಿರುವುದು ಗೊತ್ತೇ ಇದೆ. ಇದೀಗ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಫೆಬ್ರವರಿ 1 ರಂದು ಹೆಚ್.ವಿಶ್ವನಾಥ್ ಹಾಗೂ ಸಂದೇಶ್ ನಾಗರಾಜ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಕಾಂಗ್ರೆಸ್ ಸೇರುವ ಬಗ್ಗೆ ಮಾತನಾಡಿದ್ದ ವಿಶ್ವನಾಥ್, ನಾನು ಸ್ವತಂತ್ರ, ಯಾವುದೇ ಪಕ್ಷಕ್ಕೆ ಸೇರಿದವನಲ್ಲ. ನಾನು ಕಾಂಗ್ರೆಸ್ಗೆ ಬೆಂಬಲ ನೀಡುತ್ತೇನೆ. ನಾನು ಯಾವುದೇ ಷರತ್ತುಗಳಿಲ್ಲದೇ ಕಾಂಗ್ರೆಸ್ ಸೇರುತ್ತಿದ್ದೇನೆ. ಇದು ಪಕ್ಷಾಂತರವಲ್ಲ, ನನ್ನ ಮಾತೃ ಪಕ್ಷಕ್ಕೆ ವಾಪಸ್ ಹೋಗುತ್ತಿದ್ದೇನೆ. ನಾನು ಪಕ್ಷ ಬಿಡುವಾಗ ಎಲ್ಲರಿಗೂ ತಿಳಿಸಿಯೇ ಹೋಗುತ್ತೇನೆ ಎಂದು ಹೇಳಿದ್ದರು. ಅಂತೆಯೇ ಫೆ.1 ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರಲಿದ್ದಾರೆ.

