ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ, ಬೈಕ್ ಪಲ್ಟಿಯಾಗಿ ಸವಾರರೊಬ್ಬರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ.
ಮೃತರನ್ನು ಬೈಕ್ ಸವಾರ ಚೇತನ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಸಹ ಸವಾರ ಪುನೀತ್, ಪಾದಾಚಾರಿ ಗಣೇಶ ಸೇರ್ವೆಗಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರ ಕಡೆಯಿಂದ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಗಣೇಶ ಸೇರ್ವೆಗಾರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯ ಮಧ್ಯದ ಡಿವೈಡರ್ ಹತ್ತಿ ಬಿದಿದೆ. ಇದರಿಂದ ಇಬ್ಬರು ಬೈಕ್ ಸವಾರರು ಹಾಗೂ ಗಣೇಶ್ ಸೆರ್ವೆಗಾರ್ ಗಾಯಗೊಂಡಿದ್ದಾರೆ.
Advertisement. Scroll to continue reading.
ಗಂಭೀರವಾಗಿ ಗಾಯಗೊಂಡ ಚೇತನ್ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ