Connect with us

Hi, what are you looking for?

Diksoochi News

ರಾಜ್ಯ

ರೂಪಾ – ರೋಹಿಣಿ ಸಿಂಧೂರಿ ಪ್ರಕರಣ : ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

1

ನವದೆಹಲಿ : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚಿಸಿದೆ.

ರೋಹಿಣಿ ಸಿಂಧೂರಿ, ಡಿ.ರೂಪಾ ತನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದು, ಪೋಸ್ಟ್ ಗಳನ್ನು ತೆಗೆಯುವುದು ಮಾತ್ರವಲ್ಲ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು ರೋಹಿಣಿ ಸಿಂಧೂರಿ ಕೂಡ ಅವಹೇಳನಕಾರಿ ಮಾತನಾಡಿದ್ದಾರೆ. ಡಿ.ರೂಪಾ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಬುದ್ಧಿ ಭ್ರಮಣೆಯಾದವರು ಈ ರೀತಿ ಪೋಸ್ಟ್ ಮಾಡ್ತಾರೆ ಎಂದು ಹೇಳಿದ್ದಾರೆ ಹೊರತು ನೇರವಾಗಿ ಅವರಿಗೆ ಬುದ್ದಿ ಭ್ರಮಣೆಯಾಗಿದೆ ಎಂದಿಲ್ಲ ಎಂದು ವಾದ ಮಂಡಿಸಿದ್ದಾರೆ.

Advertisement. Scroll to continue reading.

ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು. ಬಳಿಕ ರೋಹಿಣಿ ಸಿಂಧೂರಿ ಪರ ವಕೀಲ ಪ್ರತಿಕ್ರಿಯಿಸಿ, ಉಜ್ವಲ ಭವಿಷ್ಯ ಇರಬಹುದು, ಆದರೆ ಜನರು ಬೇರೆ ರೀತಿ ನೋಡುತ್ತಿದ್ದಾರೆ. ನಾನು ಮೌನವಾಗಿ ಇರಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!